ಜೈಮಿನಿ ಭಾರತ ಹನ್ನೆರಡನೆಯ ಸಂಧಿ
ಜೈಮಿನಿ ಭಾರತ - ಹನ್ನೆರಡನೆಯ ಸಂಧಿ[ಸಂಪಾದಿಸಿ]
ಪದ್ಯ :-:ಸೂಚನೆ:[ಸಂಪಾದಿಸಿ]
ಅಪರಮಿತಸೈನ್ಯ ಸನ್ನಾಹದಿಂದರ್ಜುನನ | ಚಪಲಹಯಮಂ ಮರಾಳಧ್ವಜಂ ಪಿಡಿಯಲ್ಕೆ | ತಪನಸುತನಂದನ ಸುದನ್ವರ್ಗೆ ಕಾಳಗಂ ಪೂಣ್ದುದಾಡಂಬರದೊಳು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೧:[ಸಂಪಾದಿಸಿ]
ಇನ್ನು ಮೇಲಣ ಕಥೆಯನಾಲಿಸೆಲೆ ಭರತಕುಲ | ರನ್ನ ಜನಮೇಜಯ ಸುಧ್ವನ್ವಂ ಕಟಾಹದುರಿ | ಯಂ ನಾರಸಿಂಹ ಜಪದಿಂ ಜಯಿಸೆ ಲಿಖತನೆಸಗಿದ ವೈಷ್ಣವದ್ರೊಹಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨:[ಸಂಪಾದಿಸಿ]
ಭೂನಾಥ ಕೇಳ್ನಿನ್ನಸುತನ ದೆಸೆಯಿಂದೆ ನ | ಮ್ಮೀನೆಲಂ ಪ್ರಜೆ ನಾಡು ಬೀಡೂರು ಪರಿವಾರ | ಮಾನೆ ಕುದುರೆಗಳಿರ್ದ್ದ ಪಶು ಪಕ್ಷಿ ಮೃಗ ಕೀಟ ತರು ಗುಲ್ಮಲತೆಗಳೆಲ್ಲ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩:[ಸಂಪಾದಿಸಿ]
ಬಳಿಕಾತನಂ ಸುಮ್ಮನಿರಿಸಿ ನುಡಿದಂ ಶಂಖ | ನೆಲೆ ಮಹೀಪಾಲ ಹರಿಶರಣರ್ಗೆಡರ್ಗಳೆ | ತ್ತೊಳವು(ಎತ್ತಣದು?) ಬೆಳಂದಿಂಗಳ್ಗೆ ಬೆಮರುಂಟೆ ಬೇಸಗೆಯೊಳಿವನ ನಿಜಮಂ ಕಾಣದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪:[ಸಂಪಾದಿಸಿ]
ತಂದೆಯ ಚರಣಕೆರಗಿ ಶಂಖಲಿಖಿತರ ಪದಕೆ | ವಂದಿಸಿ ಪರಕೆಗೊಂಡು ಸಾರಥಿಯನಾದರಿಸಿ | ಪೊಂದೇರನಳವಡಿಸಿ ತುರಂಗಂಗಳಂ ಪೂಡಿ ಸಿಂಧಮಂ ನಿಡಿದುಮಾಡಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫:[ಸಂಪಾದಿಸಿ]
ಕೇಳ್ಗುಣಮಣಿಯೆ ಧರೆಣಿಪಾಗ್ರಣಿಯೆ ತನ್ನ ಮಗ | ನೇಳ್ಗೆಯಂ ಕಂಡುಬ್ಬಿದಂ ಮರಾಳಧ್ವಜಂ |ಸೂಳ್ಗೈದುವಾಗ ತಂಬಟೆ ಭೇರಿ ನಿಸ್ಸಾಳ ಕಹಳಾದಿ ವಾದ್ಯಂಗಳು | |
[ಆವರಣದಲ್ಲಿ ಅರ್ಥ];=
|
ಪದ್ಯ :-:೬:[ಸಂಪಾದಿಸಿ]
ಬೆರಬೆರಸುತೊತ್ತಿಡಿದು ಮುಂದೆ ಭರದಿಂದೆ ನಡೆ | ವರಸರಸುಗಳ ಕಂಠಮಾಲೆಗಳ ತೋರಮು | ತ್ತೊರಸೊರಸು ಮಿಗೆ ಪರಿದವರ ಸೂಸುದಂಬುಲದ ಚೆನ್ನೆಲದ ಮೇಲೊಕ್ಕಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೭:[ಸಂಪಾದಿಸಿ]
ಪಡೆಯೊಳನ್ನೋನ್ಯ ಸಂಘರ್ಷಣದೊಳೊಗುವ ಪೊಂ |ದೊಡವುಗಳ ರೇಣುಗಳೊ ಮೈಗಳಂ ಸೋಂಕಿ ಪುಡಿ |ವಡೆದ ಕುಂಕುಮ ಸುಗಂಧಾನುಲೇಪನದ ಚೂರ್ಣಂಗಳೋ ಪದಘಾತಿಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೮:[ಸಂಪಾದಿಸಿ]
ಮೊಗಗೈಗಳಿಂ ತಮ್ಮೊಡಲ ನೀರನಾನೆಗಳ್ | ತೆಗೆದು ಚೆಲ್ಲಲ್ ಪೊನಲ್ವರಿದ ಮಡುಗಳ ಕೆಸರೊ | ಳೊಗೆದ ನೃಪಮಂಡಲದ ಕನಕಾಭರಣ ಕಿರಣ ತರುಣಾತಪದೊಳಲರ್ದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೯:[ಸಂಪಾದಿಸಿ]
ಮುಂಕೊಂಬ ಮಂದಿ ಕುದುರೆಗೆ ಧರಾಮಂಡಲಂ | ಸಂಕುಲದ ವಾದ್ಯಧ್ವನಿಗೆ ದಿಶಾಮಂಡಲಂ | ಸುಂಖ್ಯೆಯಿಲ್ಲದೆ ಸಿಂಧ ಸೀಗುರಿ ಪತಾಕೆಗೆ ನಭೋ ಮಂಡಲಂ ಮೀರಿದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೦:[ಸಂಪಾದಿಸಿ]
ಸುತ್ತ ಪದ್ಮವ್ಯೂಹಮಂ ರಚಿಸಿನಡುವೆ ನರ | ನುತ್ತಮತುರಂಗಮಂ ಕಟ್ಟಿ ಕಾಳಗಕೆ ಭಟ | ರೊತ್ತಾಗಿ ನಿಂದರರಿವೀರರಂ ಬರಹೇಳೆನುತ್ತ ರಸನಾಜ್ಞೆಯಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೧:[ಸಂಪಾದಿಸಿ]
ನಿನ್ನಂ ಕಳುಹುವಂದು ಹಯದ ಮೇಲಾರೈಕೆ | ಗೆನ್ನನಟ್ಟಿದನಲಾ ಪಿತನಾತನಾಜ್ಞೆಯಂ | ಮನ್ನಿಸುವ ಕಾಲಮಲ್ಲವೆ ತನಗೆ ನೀನಿದಕ್ಕೆಣಿಕೆಗೊಳಬಹುದೆ ಬರಿದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೨:[ಸಂಪಾದಿಸಿ]
ಲಟಕಟಿಸುತಾಗ ಸಾತ್ಯಕಿ ಸಾಂಬ ಕೃತವರ್ಮ | ಶಠ ನಿಶಠರನಿರುದ್ಧ ಗದ ಮುಖ್ಯರಾದ ಪಟು | ಭಟರಖಿಳ ಯಾದವ ಚತುರ್ಬಲಂ ಜೋಡಿಸಿತು ಸಮರಸನ್ನಾಹದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೩:[ಸಂಪಾದಿಸಿ]
ಮೊಗಸಿತರಿಬಲವನನುಸಾಲ್ವಕನ ಸೇನೆಯೂ | ಮ್ಮೊಗದೊಳೊರೆಯುಗಿದ ಫಣಿಕುಲದಂತೆ ರಣದವಕ | ಮೊಗದೊದಗಿತಂಬುಧಿಯ ತೆರೆಯಂತೆ ಯೌವನಾಶ್ವನ ಸೈನ್ಯಮೊಂದೆಸೆಯೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೪:[ಸಂಪಾದಿಸಿ]
ತಾತ ಚಿತ್ತೈಸು ಗೋಷ್ಪದಜಲಕೆ ಹರಿಗೋಲ | ದೇತಕೆ ವೃಥಾ ಕುದುರೆಮಂದಿಯಂ ನೋಯಿಸದಿ | ರೀತಗಳನೆಲ್ಲರಂ ತೆಗೆಸೆನಗೆ ಸೆಲವಿಂದಿನಾಹವಂ ಪರಬಲವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೫:[ಸಂಪಾದಿಸಿ]
ತಾರಕಾಸುರನ ಪೆರ್ಬಡೆಗೆ ಮೈದೋರುವ ಕು | ಮಾರನಂ ತಾನಭ್ರ ಮಾರ್ಗದೋಳ್ ಸುಳಿವ ಮುಂ | ಗಾರಮಿಂಚಂ ತನ್ನ ಹೊಂದೇರುಗಿರಿಗೆಂಗುವಶನಿಯಂ ತನ್ನ ಘಾತಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೬:[ಸಂಪಾದಿಸಿ]
ದೂರದೊಳ್ಕಂಡಂ ಸುಧನ್ವನಾತನ ಬರವ | ನಾರಿವಂ ಪಾರ್ಥನಾದೊಡೆ ಕಪಿಧ್ವಜಮಿಹುದು | ದಾರವೃಷಭಾಂಕಿತದ ಕೇತುದಂಡದ ಸುಭಟನಾವನೋ ಪಾಂಡವರೊಳು |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೭:[ಸಂಪಾದಿಸಿ]
ಎಲವೊ ನೀನಾರ್ ನಿನ್ನ ಪೆಸರದೇನಾವರ್ಷಿ | ಕುಲದವಂ ನಿನ್ನ ಪಿತನಾವಾತನೆಂಬುದಂ | ತಿಳಿಪೆನಗೆ ತಾನೀಗ ವೀರಹಂಸಧ್ವಜನೃಪನ ಕುಮಾರಂ ತನ್ನನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೮:[ಸಂಪಾದಿಸಿ]
ಗೂಢಮಾಗಿರ್ದಲರ ಪರಿಮಳಂ ಪ್ರಕಟಿಸದೆ | ರೂಢಿಸಿದ ವಂಶವಿಸ್ತಾರಮಂ ಪೌರುಷದ | ಮೋಡಿಯಿಂದರಿಯಬಾರದೆ ಸಮರಸಾಧನವಿದರೊಳಹುದೆ ನಿನಗಾದೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೯:[ಸಂಪಾದಿಸಿ]
ಕರ್ಣಸುತನಾದೊಡೊಳ್ಳಿತು ವೀರನಹುದು ನೀಂ | ನಿರ್ಣಯಿಸಬಲ್ಲೆ ರಣರಂಗವಂ ಮೂಢರಾವ್ | ವರ್ಣಕದ ಮಾತುಗಳನರಿಯೆವೆನುತೆಚ್ಚಂ ಸುಧನ್ವನೀತನ ಸರಿಸಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೦:[ಸಂಪಾದಿಸಿ]
ಬರಸಿಡಿಲ ಭರದಿಂದೆ ಮಿಂಚಿನ ಹೊಳಹಿನಿಂದೆ | ಬಿರುವೆಳೆಗಳೊತ್ತಿಂದೆ ಕರ್ಣಜಂ ಕಣೆಗಳಂ | ಕರೆಯುತಿರೆ ನಡುವೆ ಖಂಡಿಸಿದಂ ಸುಧನ್ವನಾತನ ಸರಳ್ಗಳನೆಡೆಯೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೧:[ಸಂಪಾದಿಸಿ]
ಕ್ಷೋಣಿಗೆ ಸುಧನ್ವ ನಾನಿರೆ ನೀಂ ಸುಧನ್ವನೇ | ಮಾಣಿಸುವೆನೀ ಪೆಸರನೀಕ್ಷಣದೊಳೆಂದು ಪೆÇಸ | ಸಾಣಿಯಲಗಿನ ಸರಳ್ಗಳನೆಚ್ಚು ಕರ್ಣಜಂ ಪೋರ್ಗಳನವನ ಮೈಯೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೨:[ಸಂಪಾದಿಸಿ]
ಭುಗಿಭೂಗಿಸೆ ಕೋಪಾಗ್ನಿ ಮೂಡಿಗೆಯ ಕೋಲ್ಗಳಂ | ತೆಗೆತೆಗೆದು ಕರ್ಣತನಯಂ ಸುಧನ್ವನ ರಥವ | ಬಗೆಬಗೆಯೊಳಮರ್ದೆಸೆವ ಛತ್ರ ಚಾಮರ ಸಿಂದ ಸೀಗುರಿ ಪತಾಕೆಗಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೩:[ಸಂಪಾದಿಸಿ]
ತಂದರಾಗಲೆ ಸುಧನ್ವಂಗೆ ಮಣಿಮಯದ ಮ | ತ್ತೊಂದು ರಥಮಂ ಬಳಿಕ ಬಿಲ್ವಿಡಿದು ಜೇಗೈದು | ನಿಂದು ನಿಡಗಣೆಗಳಂ ತಗೆದೆಚ್ಚು ಕರ್ಣಜನ ಕೈಮೆಗಿಂಮಿಗಿಲಾಗಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೪:[ಸಂಪಾದಿಸಿ]
ವಿರಥನಾದೊಡೆ ಕರ್ಣಸೂನು ಕೈಗೆಡದೆ ಸಂ | ಗರದೊಳಸಿ ಮುದ್ಗರ ಮುಸುಂಡಿ ತೋಮರ ಖಡ | ಪರಶು ಗದೆ ಚಕ್ರ ಡೊಂಕಣಿ ಕುಂತ ಶೂಲ ಪಟ್ಟಸ ಭಿಂಡಿವಾಳ ಶಕ್ತಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೫:[ಸಂಪಾದಿಸಿ]
ಇತ್ತಲಿಂತಿರಲತ್ತವನ ಸಾರಥಿ ಬೇಗ| ಮತ್ತೊಂದು ರಥಮಂತರಲ್ಕದನಡರ್ದು ಮಸೆ| ವೆತ್ತಕೂರ್ಗಣೆಗಳಂ ಕರ್ಣಜಂ ತೆಗೆದೆಚ್ಚೊಡಾ ಸುಧನ್ವನ ಮೈಯೊಳು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೬:[ಸಂಪಾದಿಸಿ]
ನಭಕುಪ್ಪರಿಸಿ ನೆಲಕೆ ಪಾಯ್ದೆಡಬಲಕೆ ಮುರಿದು| ರಭಸದಿಂದಾರ್ದೊರ್ವರೊರ್ವರಂ ಮೀರ್ದೊದಗಿ| ವಿಭವದಿಂದಖಿಳ ಶಸ್ತ್ರಾಸ್ತ್ರದಿಂ ಸಮ ವಿಷಮ ಸೋಲುಗೆಲವುಗಳಿಲ್ಲದೆ|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೭:[ಸಂಪಾದಿಸಿ]
ಒತ್ತುವರಿಸುವರೆಚ್ಚ ಕಣೆಗಳಂ ಕಣೆಗಳಿಂ | ಕತ್ತರಿಸಿ ಮೆತ್ತುವರೊಡಲೊಳಂಬನಂಬನುರೆ | ಕಿತ್ತು ಬಿಸುಡುವರಸೃಗ್ವಾರಿಯಂ ವಾರಿಯಿಂ ತೊಳೆದೊಡನೆ ಕವಳಗೊಂಡು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೮:[ಸಂಪಾದಿಸಿ]
ರಾಯ ಕೇಳಾಗ ಪೂರಾಯ ಗಾಯದೊಳಸ್ರ | ತೋಯದಿಂದವಯವಂ ತೋಯಲಳವಳಿದು ರಾ | ಧೇಯಜಂ ಬಹಳಬಾಧೇಯನಾಗಲ್ಕವನ ಸಾರಥಿ ರಥವ ತಿರುಗಿಸೆ | |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೯:[ಸಂಪಾದಿಸಿ]
ಅರಿದನಚ್ಯುತನಸುತನೆಂಬುದಂ ಟೆಕ್ಕೆಯದ | ಕುರುಪಿಂದೆ ನುಡಿದನವನಿಲ್ಲಿ ನಿನಗಬಲೆಯರ | ಮರೆಯಿಲ್ಲ ನಿನ್ನಿಸುಗೆಗಳುಕು ವರದಾರೆನುತ ಕಲಿಸುಧನ್ವಂ ಕಣೆಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೦:[ಸಂಪಾದಿಸಿ]
ಅಸಮಸಾಯಕನೆಂದು ಬಣ್ಣಿಪರ್ ನಿನ್ನನಿಂ | ದಸಮಸಾಯಕ ನಾನೊ ನೀನೋ ನೋಡೆನುತ ಪೊಸ | ಮಸೆಯ ವಿಶಿಖಂಗಳಿಂ ಸುರಿದಂ ಸುಧನ್ವನಾತನ ಕಣೆಗಳಂ ಖಂಡಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೧:[ಸಂಪಾದಿಸಿ]
ಬರಿಯ ಪೂಗೋಲಿಸುಗೆಯಲ್ಲದಾಹವದೊಳಂ | ಕಿರಿದು ಶರಸಂಧಾನಮುಂಟಲಾ ನಿನಗೆಂದು | ಜರೆದೆಂಟು ಬಾಣದಿಂದೆಚ್ಚಂ ಸುಧನ್ವನಾತನ ಕೋಲ್ಗಳಂ ಸೈರಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೨:[ಸಂಪಾದಿಸಿ]
ಕೃಷ್ಣಸುತನೆಂದಿನ್ನೆಗಂ ಸೈರಿಸಿದೊಡೆ ನೀ | ನುಷ್ಣ ಮುಳ್ಳವನಾದೆ ತನ್ನ ಬಾಣಾವಳಿಯ | ತೃಷ್ಣೆಗರುಣಾಂಬುವಂ ನಿನ್ನೊಡರೊಳೂಡಿಸದೆ ಬಿಡುವೆನೇ ಮೇಣಸುವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೩:[ಸಂಪಾದಿಸಿ]
ಬಿಲ್ಮುರಿಯೆ ಕಾರ್ಷ್ಣಿ ಕಡುಗೋಪದಿಂದಾಕ್ಷಣಂ | ಪಲ್ಮೊರೆಯುತಸಿಪಲಗೆವಿಡಿದವನ ಮೇಲೆ ನಡೆ | ಯಲ್ಮುಂದಕಡಹಾಯ್ದನರಿಯಲಾ ರಿಪುರೌದ್ರಕರ್ಮ ಕೈತವರ್ಮಕನನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೪:[ಸಂಪಾದಿಸಿ]
ಲೇಸಾದುದಖಿಳ ಯಾದವರೊಳಗೆ ಕೃತವರ್ಮ | ನೇ ಸಮರ್ಥಂ ಕಾಣಬಹುದು ಕಾಳಗದೊಳೆನು | ತಾ ಸುಧನ್ವಂ ತೆಗೆದಿ(ದೆ)ಸಲ್ಕವನ ಕಣೆಗಳಂ ಕಡಿದಿವಂ ಮಗುಳೆಚ್ಚೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೫:[ಸಂಪಾದಿಸಿ]
ಹಾರ್ದಿಕ್ಯನಿಸುಗೆಯಿಂದುರೆ ನೊಂದು ಕೋಪದಿಂ | ದಾರ್ದಾ ಸುಧನ್ವನಿಪ್ಪತ್ತುನಾಲ್ಕಂಬಿನಿಂ | ತೇರ್ದೆಗೆವ ಕುದುರೆಗಳ ಕಾಲ್ಗಳಂ ಗಾಳಿಗಳ ಕೀಲ್ಗಳಂ ಮೂಡಿಗೆಯನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೬:[ಸಂಪಾದಿಸಿ]
ಸಾಲ್ವಾನುಜಂ ಕಣೌ ತಾನೆನ್ನೊಳಾಹವಕೆ | ಮೇಲ್ವಾಯ್ದೊಡನುಪಮ ಸುರೇಂದ್ರನ ಪರಾಕ್ರಮಕೆ | ಸೋಲ್ವೆನೇ ತನ್ನೊಳ್ ಪೆÇಣರ್ದು ಸಾಯದೆ ಧರ್ಮರಾಜನವರಂ ಕಾಣ್ಬುದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೮:[ಸಂಪಾದಿಸಿ]
ಬಲ್ಲೆನನುಸಾಲ್ವನೆಂದಳವಿಯಂ ಬಿಟ್ಟೊಡಾಂ | ಬಿಲ್ಲಾಳೇ ವೇಳ್ ಧರ್ಮರಾಜನವರಂ ಕಾಣ್ಬ | ನಲ್ಲ ಕಾಣಿಸುವೆನೀಗಳೆ ಧರ್ಮರಾಜನವರಂ ತರಹರಿಸು ನಿನ್ನನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೮:[ಸಂಪಾದಿಸಿ]
ಫಡಫಡೆಲವೆಲವೊ ತೊಲತೊಲಗೆನುತೆರೋಷದಿಂ | ಘುಡಿಘುಡಿಸಿ ಕೌಂಡುವ ಕಾಯದಿಂದನುಸಾಲ್ವ | ನೊಡನೊಡನೆ ಪೊಳೆಪೊಳೆವ ಪೂಸಮಸೆಯ ನಿಡುನಿಡು ಸರಳ್ಗಳಂತೆಗೆದಿಸುತಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೯:[ಸಂಪಾದಿಸಿ]
ಮತ್ತೆ ಕಿಡಿಯಿಡೆಕೋಪಮನುಸಾಲ್ವನಬ್ಧಿಯಂ | ತುತ್ತುಗೊಳ್ವುರಿಗೆ ಸರಿಯಾದೊಂದು ಬಾಣಮಂ | ಕಿತ್ತು ಹೂಡಿದನಿದಂ ತರಹರಿಸಿಕೊಳ್ಳೆನುತ ತೆಗೆದೆಚ್ಚು ಬೊಬ್ಬಿರೆಯಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೦:[ಸಂಪಾದಿಸಿ]
ಲೆಲೆ ಕವಿಕವಿಯೆನುತವನ ಬಲಂ ಕಂಡು ಸಂ | ಕಲೆಗಡಿದ ಮುಗಿಲಂತಿವನ ಮೇಲೆ ಕೈದುಗಳ | ಮಳೆಗೆರಯುತಿಟ್ಟಣಿಸಿ ನೂಕಲನುಸಾಲ್ವಂ ಕನಲ್ದು ಜಗದಳಿವಿನಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೧:[ಸಂಪಾದಿಸಿ]
ಕಂದೆರದು ಕಂಡಂ ಸುಧನ್ವಂ ಬಳಿಕ ಖಾತಿ | ಯಿಂದೆ ಕೋದಂಡಮಂ ಕೊಂಡೆಲವೊ ಕಲಿಯಾಗಿ | ನಿಂದಿದಂ ಸೈರಿಸಿದೆಯಾದೊಡಿನ್ನಿಸುವುದಿಲ್ಲಾವು ಹೋಗೆನುತ ಹೆದೆಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೨:[ಸಂಪಾದಿಸಿ]
ಪೂಣೆಹೊಕ್ಕವನಿಸುವ ಬಾಣಂಗಳರಿಭಟರ | ಗೋಣನರಿದುಚ್ಚಳಿಸೆ ಮಾಣದೆ ಗಗನಕೇಳ್ವ | ಸೋಣೀತದ ಧಾರೆಗಳ್ ಶೋಣಾಭ್ರದಂತಿರಲ್ ಪ್ರಾಣಿಗಳ ದೃಷ್ಟಿಗಳ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೩:[ಸಂಪಾದಿಸಿ]
ಸಂದಣಿಸಿ ದಂತಿಗಳಘಟೆಗಳೊತ್ತರಿಸಲ್ಕೆ | ಸಂದಣಿಸಿದಂ ಸರಳ ಸಾರದಿಂ ಕೆಡಹಿದಂ | ಕೊಂದನುರವಣಿಸಿ ಕಾಲಾಳ್ಗಳಂ ಮುಳಿದುಬಳಿಕೊಂದನುಳಿಯದೆ ರಣದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೪:[ಸಂಪಾದಿಸಿ]
ಕೆಡೆದೊಡಲ ಸೀಳಿಂದೆ ಕಡಿವಡೆದ ತೋಳಿಂದೆ | ತೊಡೆಮಡದ ತುಂಡಿಂದೆ ನೆಣವಸೆಯ ಜೊಂಡಿಂದೆ | ಬಿಡುಮಿದುಳ ತುಂಡದಿಂ ರುಂಡದಿಂ ಮುಂಡದಿಂ ಖಂಡದಿಂದೆ |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೪:[ಸಂಪಾದಿಸಿ]
ಕಾಕ ಬಕ ಗೃಧ್ರ ಗೋಮಾಯ ಸಂತತಿಗಳಿಂ | ಡಾಕಿನಿ ಪಿಶಾಚ ವೇತಾಳ ಭೂತಂಗಳಿಂ | ಭೀಕರದೊಳಂಜಿಸಿದುವಾರ್ದು ರಿಂಗಣಗುಣಿವ ಕಲಿಗಳ ಕಪಾಲಂಗಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೬:[ಸಂಪಾದಿಸಿ]
ನೋಡಿದಂ ಸಾತ್ಯಕಿ ಸುಧನ್ವನಾಟೋಪಮಂ | ಮಾಡಿದಂ ಬದ್ದಭ್ರುಕುಟಿಯಿಂದೆ ಕೋಪಮಂ | ತೀಡಿದಂ ತಿರುವನೇರಿಸಿ ಮಿಡಿದು ಚಾಪಮಂ ತಾಗಿದನವನ ರಥವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೭:[ಸಂಪಾದಿಸಿ]
ಗಾಯವಡೆದೆಕ್ಕಲನ ತೆರದಿಂ ಕೆರಳ್ದು ಶೈ | ನೇಯನಂ ಮಗುಳೆ ಮೂವತ್ತೈದು ಕೋಲ್ಗಳಿಂ | ನೋಯಿಸಿದನಾ ಸುಧನ್ವಂ ಬಳಿಕ ಸಾತ್ಯಕಿ ಸಹಸ್ರ ಸಂಖ್ಯಾಕಮಾದ | |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೮:[ಸಂಪಾದಿಸಿ]
ನಿಂದು ಕಾದಿದರೊಮ್ಮೆ ಕೈದುಕೈದುಗಳೊಳೈ | ತಂದುಕಾದಿದರೊಮ್ಮೆ ಮತ್ತೆ ಪೆÇಸತೇರ್ಗಳಿಂ | ಬಂದು ಕಾದಿದರೊಮ್ಮೆ ಕೂಡೆ ತಮತಮಗೊದಗಿದೆಡಬಲದ ಪಡಿಬಲವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೯:[ಸಂಪಾದಿಸಿ]
ಬವರಮಿರ್ವರ್ಗೆ ಸರಿಯಾಗೆ ಕಡುಗೋಪದಿಂ | ದವಗಡಿಸಿದಂ ಸುಧನ್ವಂ ಬಳಿಕ ಸಾತ್ಯಕಿಯ | ಸವಗ ಸೀಸಕ ಬಾಣ ಬತ್ತಳಿಕೆ ಸಿಂಧ ಸೀಗುರಿ ಛತ್ರಚಾಮರವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೦:[ಸಂಪಾದಿಸಿ]
ಸತ್ಯಕಸುತಂಗೆ ಪರಿಭವಮಾಗೆ ಭುಜಬಲದೊ | ಳತ್ಯಧಿಕಯೌವನಾಶ್ವಾಸಿತಧ್ವಜಗದಾ | ದಿತ್ಯಭವಸೂನು ಶಠ ನಿಶಠ ಕೃತವರ್ಮ ಸಾಂಬಾನುಸಾಲ್ವಪ್ರಮುಖರು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೧:[ಸಂಪಾದಿಸಿ]
ಮುಂಜೆರಗನಳವಡಿಸಿ ವೀರಪಳಿಯಂ ಬಿಗಿದು | ರಂಜಿಪ ತನುತ್ರ ಸೀಸಕವನಾಂತಮರಗಣ | ಕಂಜಳಿಯನೆತ್ತಿ ಪಳವಿಗೆಯ ಹನುಮಂಗೆರಗಿ ಬಲವಂದು ಮಣಿರಥವನು || |
[ಆವರಣದಲ್ಲಿ ಅರ್ಥ];=
|
ಹೋಗಿ[ಸಂಪಾದಿಸಿ]
ನೋಡಿ[ಸಂಪಾದಿಸಿ]
ಜೈಮಿನಿ ಭಾರತ-ಸಂಧಿಗಳು:*1 * 2 *3 * 4 * 5 *6 * 7 * 8 *9 * 10 * 11* 12* 13 * 14 * 15 * 16 *17* 18 * 19* 20 * 21 * 22* 23* 24 * 25* 26* 27* 28* 29* 30* 31* 32* 33* 34 |
ಪರಿವಿಡಿ[ಸಂಪಾದಿಸಿ]
ಕನ್ನಡ ವಿಕಿಸೋರ್ಸ್[ಸಂಪಾದಿಸಿ]
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ[ಸಂಪಾದಿಸಿ]
- ↑ ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
- ↑ ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.