ಅರ್ಪಿತವ ಮಾಡುವ ಅವಧಾನವು

ವಿಕಿಸೋರ್ಸ್ದಿಂದ


Pages   (key to Page Status)   

ಅರ್ಪಿತವ ಮಾಡುವ ಅವಧಾನವು

ಅನ್ಯವ ಸೋಂಕದ ಅವಧಾನವು 
ಅರಿಷಡ್ವರ್ಗಂಗಳ ಮುಟ್ಟಲೀಯದವಧಾನದ ಪರಿಯ ನೋಡಾ
ಪಂಚಭೂತವೆಂಬ ಭವಿಯ ಕಳೆದು ಪ್ರಸಾದಿಯಾಗಿಪ್ಪ ಪರಿಯ ನೋಡಾ
ಪಂಚೇಂದ್ರಿಯಂಗಳ ಗುಣವಳಿದು ಪಂಚವಿಂಶತಿತತ್ವದಲ್ಲಿ ಪರಿಣಾಮಿ ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.