ಓ ನನ್ನ ಚೇತನಾ
ಬಾಗಿಲೊಳು ಕೈ ಮುಗಿದು ಒಳಗೆ ಬಾ ಯಾತ್ರಿಕನೆ
ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು
ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು
ಧನ್ಯತೆಯ ಕುಸುಮಗಳನರ್ಪಿಸಿಲ್ಲಿ ||
ಗಂಟೆಗಳ ದನಿಯಿಲ್ಲ, ಜಾಗಟೆಗಳಿಲ್ಲಿಲ್ಲ
ಕರ್ಪೂರದಾರತಿಯ ಜ್ಯೋತಿಯಿಲ್ಲ
ಭಗವಂತನಾನಂದ ರೂಪುಗೊಂಡಿಹುದಿಲ್ಲಿ
ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ ||
ಸರಸದಿಂದುಲಿಯುತಿದೆ ಶಿಲೆಯು ರಾಮಾಯಣವನಿಲ್ಲಿ
ಬಾದರಾಯಣನಂತೆ ಭಾರತವ ಹಾಡುತಿಹುದಿಲ್ಲಿ
ಕುಶಲತೆಗೆ ಬೆರಗಾಗಿ ಮೂಕವಾಗಿದೆ ಕಾಲವಿಲ್ಲಿ
ಮೂರ್ಛೆಯಲಿ ಮೈ ಮರೆತು ತೇಲುವುದು ಭೂಭಾರವಿಲ್ಲಿ ||
ಕವಿ: ಕುವೆಂಪು
ಸಂಗೀತ: ಪಿ ಕಾಳಿಂಗರಾವ್
ಧ್ವನಿ ಸುರುಳಿ: ಬಾರಯ್ಯ ಬೆಳದಿಂಗಳೇ
ಗಾಯಕರು: ಪಿ ಕಾಳಿಂಗರಾವ್