ಕರ್ನಾಟಕ ರೈತ ನಾಡಗೀತೆ

ವಿಕಿಸೋರ್ಸ್ದಿಂದ

ಕವಿ : ಕುವೆಂಪು
ಗಾಯನ : ಸಿ.ಅಶ್ವಥ್
ಚಿತ್ರ: ಕಾಮನ ಬಿಲ್ಲು
ಸಂಗೀತ : ಎಂ.ರಂಗರಾವ್


ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ

ಫಲವನು ಬಯಸದೆ ಸೇವೆಯೆ ಪೂಜೆಯು ಕರ್ಮವೆ ಇಹ ಪರ ಸಾಧನವು

ಕಷ್ಟದೊಳನ್ನವ ದುಡಿವನೆ ತ್ಯಾಗಿ ಸೃಸ್ಟಿ ನಿಯಮದೊಳಗವನೆ ಭೋಗಿ ||ಉಳುವಾ ಯೋಗಿಯ ನೋಡಲ್ಲಿ||


ಲೋಕದೊಳೇನೇ ನಡೆಯುತಲಿರಲಿ ತನ್ನೀ ಕಾರ್ಯವ ಬಿಡನೆಂದೂ

ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ ಹಾರಲಿ ಗದ್ದುಗೆ ಮುಕುಟಗಳು

ಮುತ್ತಿಗೆ ಹಾಕಲಿ ಸೈನಿಕರೆಲ್ಲ ಬಿತ್ತುಳುವುದನವ ಬಿಡುವುದೆ ಇಲ್ಲ ||ಉಳುವಾ ಯೋಗಿಯ ನೋಡಲ್ಲಿ||


ಯಾರು ಅರಿಯದ ನೇಗಿಲ ಯೋಗಿಯು ಲೋಕಕೆ ಅನ್ನವನೀಯುವನು

ಹೆಸರನು ಬಯಸದೆ ಅತಿಸುಖ ಗಳಿಸದೆ ದುಡಿವನು ಗೌರವಕಾಶಿಸದೆ

ನೇಗಿಲ ಕುಳದೊಳಗಡಗಿದೆ ಕರ್ಮ ನೇಗಿಲ ಮೇಲೆಯೆ ನಿಂತಿದೆ ಧರ್ಮ ||ಉಳುವಾ ಯೋಗಿಯ ನೋಡಲ್ಲಿ||

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ