ಗುರುವಿನ ಗುಲಾಮ

ವಿಕಿಸೋರ್ಸ್ದಿಂದ

ರಚನೆ: ಶ್ರೀ ಪುರಂದರದಾಸರು

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಎಣಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ