ವಿಷಯಕ್ಕೆ ಹೋಗು

ಪುಟ:Kedage.pdf/೨೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

14/ ಕೇದಗೆ

ಬ್ರಹ್ಮಾಂಡವನ್ನು ತುಂಬಿಸಬಹುದು. ನೂರಾರು ವರ್ಷಗಳ ಪರಂಪರೆಯಿಂದ ಸಿದ್ಧವಾದ ಭಾಷೆ, ಭಾವಗಳಿಂದ ತುಂಬಿ ಪಾತ್ರಧಾರಿಗಳ ಕಲ್ಪನಾಸಾಮರ್ಥ್ಯಗಳಿಂದ ದಿನದಿನ ಹೊಸತಾಗುವ ಯಕ್ಷಗಾನದ ಮಾತುಗಾರಿಕೆ ಒಂದು ಶ್ರೇಷ್ಠ ನಾಟಕಪ್ರಕಾರ. ಒಂದು ಸಾಹಿತ್ಯಕ ಅದ್ಭುತ. ಯಕ್ಷಗಾನದ ಒಳ್ಳೆಯ ಮಾತುಗಾರರನ್ನು ಶ್ರೇಷ್ಠ ಕವಿ, ನಾಟಕಕಾರ, ವಿಮರ್ಶಕರೊಂದಿಗೆ ಹೋಲಿಸಬಹುದು. ಇಲ್ಲಿ ಮಾತುಗಾರನಿಗಿರುವ ಅಸೀಮ ಸ್ವಾತಂತ್ರದಿಂದಾಗಿ, ಒಂದೇ ಕತೆಯಲ್ಲಿ ಪಾತ್ರಧಾರಿಗಳು ಬದಲಾದಾಗ ಅಥವಾ ಒಂದೇ ತಂಡದಲ್ಲಿ ಪಾತ್ರಗಳು ಬದಲಾದಾಗ ವಿಭಿನ್ನ ರೂಪದಿಂದ ಅಭಿವ್ಯಕ್ತವಾಗುತ್ತದೆ.

ಪ್ರೇಕ್ಷಕರಿಗೆ ಮುಖ್ಯವಾಗಿ ತಟ್ಟುವ ಅಂಶ ಮಾತುಗಾರಿಕೆಯೇ. ತಮ್ಮ ಮಾತುಗಾರಿಕೆಯಿಂದಲೇ ಆಟಕ್ಕೆ ಜೀವ ತುಂಬುವ ಪ್ರಚಂಡ ಕಲಾವಿದರಿದ್ದಾರೆ. ಪೀಠಿಕೆ ಪದ್ಯದ ಅರ್ಥ, ಸಂವಾದಗಳೆಲ್ಲ ಭಾವಕ್ಕೆ, ವಾದಗಳ ಖಂಡನೆ ಮಂಡನೆಗಳಿಗೆ, ಪಾತ್ರ ಚಿತ್ರಣಕ್ಕೆ ಅಸಂಖ್ಯ ಸಾಧ್ಯತೆಗಳಿವೆ. ಈ ಪಾತ್ರಧಾರಿಗಳಿಗೆ ವಿಸ್ಕೃತ ಪುರಾಣಜ್ಞಾನವ್ಯುತ್ಪತ್ತಿ, ಲೋಕಪರಿಶೀಲನ, ಭಾವಸಂಪತ್ತು. ಸಶಕ್ತಕಂಠ, ಪ್ರಸಂಗಜ್ಞಾನ ವಾದಸಂವಾದಗಳ ಜಾಣೆ, ಭಾಷೆಯ ಪ್ರಭುತ್ವ ಶೋತೃಗಳನ್ನು ಸೆರೆ ಹಿಡಿಯುವ ಜಾಣ್ಮ, ಹಾಸ್ಯ ಪ್ರಜ್ಞೆ ಇವೆಲ್ಲ ಇರಬೇಕು. ಇದಿರಾಳಿಯ ಮಾತಿಗೆ ಉತ್ತರ ಸಿದ್ಧವಾಗಿರಬೇಕು.

ಶೇಣಿ ಗೋಪಾಲಕೃಷ್ಣ ಭಟ್ಟ, ಮಲ್ಪೆ ಸಾಮಗ ಸೋದರರು, ಕೆರೆಮನೆ ಮಹಾಬಲ ಹೆಗ್ಡೆ, ಕುಂಬಳೆ ಸುಂದರರಾವ್, ಕೊಳ್ಳೂರು ರಾಮಚಂದ್ರರಂತಹ ಅನೇಕ ಮಾತುಗಾರರು ಆಟದ ಮಾತುಗಾರಿಕೆಗೆ ಪರಿಷ್ಕಾರಗಳನ್ನು, ನಾಜೂಕನ್ನು ತಂದಿದ್ದಾರೆ. ಶೇಣಿ ಅವರ ಮಾತುಗಾರಿಕೆಯಂತೂ ಸರ್ವಾಂಗಪೂರ್ಣವಾಗಿ, ನಿತ್ಯನವೀನಕಲ್ಪನೆ, ವಿಮರ್ಶೆ, ವಾದವೈಖರಿಗಳಿಂದ ಕೂಡಿದ ಮಹಾನ್ ಕಲಾ ನಿರ್ಮಿತಿ. ಪಡುವಲಪಾಯದ ಮಾತುಗಾರಿಕೆ, ಶಿಷ್ಟ - ಜಾನಪದಗಳ ಒಂದು ವಿಚಿತ್ರ ಪಾಕವಾಗಿದ್ದು, ಇದಕ್ಕೆ ಕರಾವಳಿಯ ಭಾಷೆಯೇ ಸ್ವಭಾವತಃ ಗ್ರಾಂಥಿಕಭಾಷೆಯನ್ನು ಹೊಂದಿ ಬೆಳೆದ ಆಡು ಭಾಷೆ ಎಂಬ ಅಂಶವೂ ಕಾರಣವಾಗಿದೆ.

ಕರಾವಳಿಯಲ್ಲೂ ಮಲೆನಾಡಿನಲ್ಲಿ ವಿಶೇಷ ಪ್ರಚಾರದಲ್ಲಿರುವ ಇನ್ನೊಂದು ಕಲಾಪ್ರಕಾರವಾದ ತಾಳಮದ್ದಳೆ - (ಜಾಗರ) ಎಂಬುದನ್ನು ಇಲ್ಲಿ ಪ್ರಸ್ತಾಪಿಸಬಹುದು. ಇದು ಸಹ ದೀರ್ಘವಾದ ಇತಿಹಾಸವುಳ್ಳದ್ದು (1556 ರ ಬಳ್ಳಾರಿ ಸೋಮ ಸಮುದ್ರ ಶಾಸನದಲ್ಲಿ ತಾಳಮದ್ದಳೆಯ ಉಲ್ಲೇಖವಿದೆ. (ಕಾರಂತರ 'ಬಯಲಾಟ') ತಾಳಮದ್ದಲೆ ವೇಷ, ಕುಣಿತವಿಲ್ಲದ ಯಕ್ಷಗಾನ. ಹಾಡು ಮತ್ತು ಮಾತು ಮಾತ್ರ. ಪಾತ್ರಧಾರಿಗಳು ದೈನಂದಿನ ಉಡುಪಿನಲ್ಲಿ ಇದ್ದು, ಬರಿಯ ಮಾತಿನಿಂದ ನಿರ್ಮಿಸುವ ಅನುಭವಮಂಟಪ, ಪುರಾಣಲೋಕ