ಶ್ರೀನಿವಾಸ ಎನ್ನ ಬಿಟ್ಟು

ವಿಕಿಸೋರ್ಸ್ದಿಂದ

ರಚನೆ: ಶ್ರೀ ಪುರಂದರದಾಸರು



ಶ್ರೀನಿವಾಸ ಎನ್ನ ಬಿಟ್ಟು ನೀನಗಲದೆ

ಮನವೆಂಬೊ ಮಂಟಪ
ತನುವೆಂಬೊ ಹಾಸು ಮಂಚ
ಜ್ಞಾನವೆಂಬೊ ದಿವ್ಯದೀಪದ ಬೆಳಕಲಿ
ಸನಕಾದಿ ವಂದ್ಯ ನೀ ಬೇಗ ಬಾರೊ

ಪಂಚದೈವರು ಯಾವಾಗಲೂ ಎನ್ನ
ಹೊಂಚು ಹಾಕಿ ನೋಡುತಾರೆ
ಹೊಂಚುಗಾರರು ಆರು ಮಂದಿ
ಆವ ಹಿಂದು ಮುಂದಿಲ್ಲದೆ ಎಳೆಯುತಾರೆ

ಮುನ್ನ ಮಾಡಿದ ದುಷ್ಕರ್ಮದಿ ಬಳಲಿದೆನೊ
ಇನ್ನಾದರೂ ಎನ್ನ ಕೈ ಪಿಡಿಯೊ
ಘನ್ನ ಮಹಿಮ ಸಿರಿ ಪುರಂದರ ವಿಠ್ಠಲ
ಮನ್ನಿಸಿ ಎನ್ನನು ಕಾಯಬೇಕೊ


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ