ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತ್ರೆ.djvu/೭೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೬೦

ಶ್ರೀ ರಾಮಕೃಷ್ಣ ಪರಮಹಂಸರ

ರಿಸುವುದಕ್ಕೆ ಹೋದರು. ಹೋಗುವುದೇತಡ, ಅವರು ಕನ್ನೆ,ಯನ್ನು ಕೊಡುವುದಕ್ಕೆ ಒಪ್ಪಿದರು. ಕೆಲವು ದಿನಗಳಲ್ಲಿ ವಿವಾಹವೂನೆರವೇರಿತು. (1859.)

ಮದುವೆಯಾದ ಮೇಲೆ ಪರಮಹಂಸರು ಆರೇಳು ತಿಂಗಳದಿವಸ ತಮ್ಮ ಊರಲ್ಲೇ ಇದ್ದರು. ಮನೆಯಲ್ಲಿದ್ದ ಬಡತನದ ತಾಪತ್ರಯಗಳನ್ನು ನೋಡಿ ಕಲ್ಕತ್ತೆಗೆ ಹಿಂತಿರುಗಿ ಬಂದು ಪುನಃಅರ್ಚಕನ ಕೆಲಸಕ್ಕೆ ನಿಂತರು. ಒಂದು ದಿನ ಸರಿಯಾಗಿ ಪೂಜೆಮಾಡಿದರೋ ಇಲ್ಲವೋ ಅವರ ಮನಸ್ಸು ದೇವರ ಪೂಜೆಯಲ್ ಲಿಪೂರ್ತಿಯಾಗಿ ನಿಂತುಹೋಯಿತು. ತಾಯಿ, ಹೆಂಡತಿ, ಸಂಸಾರ.ಸಂಪಾದನೆ ಎಲ್ಲವೂ ಪೂರ್ತಿಯಾಗಿ ಮರೆತುಹೋದುವು. ಪುನಃ"ಏನುಮಾಡಿದರೆ ಸರ್ವದಾ ದೇವಿಯನ್ನು ನೋಡಿಯೇನು” ಎಂಬ ಯೋಚನೆಯು ಮನಸ್ಸನ್ನೆಲ್ಲ ತುಂಬಿಕೊಂಡಿತು. ಹಿಂದಿನ ಚಿಹ್ನೆಗಳೆಲ್ಲ ಮತ್ತೆ ಕಾಣಿಸಿಕೊಂಡುವು. ಎದೆ ಕೆಂಪಗಾಯಿತು; ಕಣ್ಣಿನಿಂದ ನೀರು ಸುರಿಯಲು ಮೊದಲಾಯಿತು ; ನಿದ್ರೆ ಹೋಯಿತು :ಗಾತ್ರ ದಾಹವು ಪ್ರಾರಂಭವಾಯಿತು.