ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತ್ರೆ.djvu/೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೫೬

ಶ್ರೀ ರಾಮಕೃಷ್ಣ ಪರಮಹಂಸರ

ಆದರೆ ಪ್ರೇಮ-ದುಃಖ-ಕರುಣಾ-ಸಹಿಷ್ಣುತಾ- ಪೂರ್ಣವಾದ ಆಕೆಯಮುಖದಲ್ಲಿದ್ದಂಥ ತೇಜಸ್ವಿತೆಯನ್ನು ಮತ್ತಾವ ದೇವೀಮೂರ್ತಿಯಲ್ಲಿಯೂ ನಾನು ನೋಡಿರಲಿಲ್ಲ. ಆಕೆಯು ಪ್ರಸನ್ನ ದೃಷ್ಟಿಯಿಂದನನ್ನ ಕಡೆಗೆ ನೋಡುತ್ತಾ ನೋಡುತ್ತಾ ಮೆಲ್ಲಮೆಲ್ಲಗೆ ನನ್ನ ಕಡೆಗೆಬಂದಳು. ಸ್ತ೦ಭಿತನಾಗಿ ' ಈಕೆ ಯಾರು ? ' ಎಂದು ಯೋಚಿಸುತಿದ್ದೆ ಅಷ್ಟು ಹೊತ್ತಿಗೆ ಎಲ್ಲಿಂದಲೋ ಆಂಜನೇಯನು ಬಂದುಆಕೆಯ ಕಾಲ ಹತ್ತಿರ ಕೂತುಕೊಂಡ. ಆಗ ನನ್ನ ಮನಸ್ಸಿಗೆಹಾಗೇ ಹೊಳೆಯಿತು: ಸೀತಾ ! ಜನ್ಮದುಃಖಿನೀ ಸೀತಾ !! ಜನಕರಾಜನಂದಿನೀ ಸೀತಾ !! ರಾಮಮಯ ಜೀವಿತಾ ಸೀತಾ !!! ಆಗತಾಯಿ, ತಾಯಿ, ಎಂದು ಆಕೆಯ ಕಾಲಮೇಲೆ ಬೀಳುವದಕ್ಕೆಹೋಗುತ್ತಿದ್ದೆ. ಅಷ್ಟರಲ್ಲಿ ಆಕೆಯು ಚಕಿತಳಾದವಳ ಹಾಗೆ ಬಂದು(ತಮ್ಮ ಶರೀರವನ್ನು ತೋರಿಸಿ) ಇದರೊಳಗೆ ಪ್ರವೇಶಮಾಡಿದಳು.ಆನಂದದಿಂದಲೂ ವಿಸ್ಮಯದಿಂದಲೂ ಬಾಹ್ಯ ಜ್ಞಾನ ಶೂನ್ಯನಾಗಿನೆಲದಮೇಲೆ ಬಿದ್ದುಬಿಟ್ಟೆ".

ಈ ನಾಲ್ಕು ವರ್ಷಗಳಲ್ಲಿಯೇ ಪರಮಹಂಸರು ಇನ್ನೂ ಅನೇಕಸಾಧನಗಳನ್ನು ಮಾಡಿದರು. ಮನಸ್ಸಿನಿಂದ ಹಣದಮೇಲಿನ ಆಸಕ್ತಿಯನ್ನು ದೂರಮಾಡುವುದಕ್ಕಾಗಿ ಕೆಲವು ಬಂಗಾರದ ನಾಣ್ಯಗಳನ್ನೂಅದರ ಜೊತೆಯಲ್ಲಿ ಸ್ವಲ್ಪ ಮಣ್ಣನ್ನೂ ಹಿಡಿದುಕೊಂಡು ಸದಸದ್ವಿಚಾರಮಾಡಲಾರಂಭಿಸಿ, ಸಚ್ಚಿದಾನಂದಸ್ವರೂಪವಾದ ನಿತ್ಯವಸ್ತುವನ್ನುಪಡೆಯುವುದಕ್ಕೆ ಅದರಿಂದ ಯಾವ ಸಹಾಯವೂ ಆಗುವುದಿಲ್ಲವೆಂದುನಿರ್ಧರಮಾಡಿಕೊಂಡು, ಮನಸ್ಸಿನಲ್ಲಿ ಅದು ದೃಢವಾಗಿಲ್ಲುವಂತೆ'ಮಣ್ಣೇ ಚಿನ್ನ' 'ಚಿನ್ನವೇ ಮಣ್ಣ' ಎಂದು ಮೇಲಿಂದ ಮೇಲೆಹೇಳುತ್ತ ಅವೆರಡನ್ನೂ ಗಂಗೆಯೊಳಗೆ ಹಾಕಿ ಬಿಟ್ಟರು. ಆ ಬ್ರಹ್ಮಸ್ತಂಬ ಪರ್ಯ೦ತವಾಗಿರತಕ್ಕ ಸಕಲವಸ್ತು ವ್ಯಕ್ತಿಗಳೂ ಜಗನ್ಮಾತೆಯ ಅಂಶವೆಂಬುದನ್ನು ದೃಢಮಾಡಿಕೊಳ್ಳುವುದಕ್ಕಾಗಿ ದೇವಸ್ಥಾನದಲ್ಲಿ ಕಂಗಾಳಿಗಳು ಊಟಮಾಡಿ ಬಿಟ್ಟು ಹೋಗಿದ್ದ ಎಂಜಲೆಲೆ