ಪುಟ:ಕವಿಯ ಸೋಲು.pdf/೧೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯು ಸೋಲು

ದಾಡಿಯು ಬೆಳೆದರೆ ಬೆಳೆವುದೆ ಬುದ್ದಿ
ಸಾಬಿಯ ಬುದ್ದಿ, ಕತ್ತೆಯ ಲದ್ದಿ”
ಎಂದೆಲ್ಲಾ ಕೋಪದಿ ಕೂಗಿದರು.
ಆದುದು ಗಜಬಿಜೆಯಾಗುಂಪಿನ
ಜ್ಞಾನಿಯು ಹೇಳಿದ ಸಂತೋಷದಲಿ
"ದಾಡಿಯ ಹಳಿಯದೆ ಬೆಳೆಯಿಸಿರಣ್ಣ
ದಾಡಿಯ ಮೋಕ್ಷಕೆ ಒಯ್ಯುವುದಣ್ಣ
ದಾಡಿಯೆ ತತ್ವಜ್ಞಾನಿಯು ಗುರುತು
ದಾಡಿಯ ವೀರರ ಧೀರರ ಗುರುತು
ಬಾಡಿಯೆ ಸಣ್ಣಳ ಮೆಚ್ಚಿನ ಗುರುತು
ದಾಡಿ ಏಕಚ್ಚತ್ರದ ಗುರುತು ;
ಮೀಸೆಯ ಬೋಳಿಸಿ ಗಡ್ಡ ಬೋಳಿಸಿ
ಶೌರ್ಯವ ಧೈರ್ಯವ ಎಲ್ಲಾ ಬೋಳಿಸಿ
ಮಿಣಮಿಣ ಮೆರೆಯುವ ಹೇಡಿಗಳನ್ನು
ನಮ್ಮಲಿ ಕೂಡರು ಗೊಂಬೆಗಳನ್ನು.
ಕೇಳಿರಿ, ನಿಮ್ಮಯ ಪೂರ್ವದ ಜನಗಳು
ವೇದವ್ಯಾಸರು ವಾಲ್ಮೀಕಿಗಳು
ದಾಡಿಯ ಬೆಳೆಯಿಸ ಕವಿತೆಯು ಬಂತು
ಕವಿತೆಯ ಜತೆಯಲಿ ಘನತೆಯು ಬಂತು
ಕವಿತೆಯು, ಘನತೆಯು ಲೋಕದಿ ನಿಂತು
ಇಂದೂ ಮನ್ನಣೆ ಪಡೆಯುತ್ತಿಹುದು
ಎಂದೆಂದೂ ಮನ್ನಣೆ ಪಡೆಯುವುದು,
ಹಿಂದಿನ ಋಷಿಗಳು ವನವಾಸಿಗಳು
ದಾಡಿಯ ಬೆಳೆಯಿಸೆ ಮಾತಸಸಿಗಳು
ದಾಡಿಗೆ ಈಗಲು ಬೆಲೆಯುಂಟಣ್ಣ