ಪುಟ:ಕವಿಯ ಸೋಲು.pdf/೩೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು


ಕಣ್ಣನೀರು ಸುರಿವುದೇಕೆ
ಮನದಿ ದುಃಖವೇತಕೌ
ಆವ ಕಜ್ಜ ನಿನ್ನನೀಗ
ಕಾಡಿಗಿಲ್ಲಿ ತಂದಿತೌ."

'ತಾಯೆ' ಮಾತು ಕಿವಿಗೆ ಶೂಲ
ಕಾದ ಸೀಸವಾಗಲು
"ಏನು ಮಾತು ಕಲಿತೆ ನೀನು
ಏನು ಮಾತು ! ” ಎಂದಳು.

"ಏನು ಕಲಿತರೇನು ಫಲವು
ದೇವಗುರುವ ಪುತ್ರನು
ಕಲಿಯಲಿಲ್ಲ ನಲ್ಮೆವಾತು
ದೇವಯಾನಿ ಕಲಿಪಳು

ಎಳೆಯ ಗರುಕೆ ಸೊಂಪುಪಾಸು
ಮೇಲೆ ತಳಿರು ತೋರಣ
ಸಂಜೆಗೆಂಪಿನಾರತಿಯಲಿ
ನಲ್ಮೆವಾತು ಕಲಿಪಳು.

ಪ್ರಿಯಳು ಓಪಳೆಂಬ ಮಾತು
ನಿನ್ನ ಲೋಕದಿಲ್ಲವೆ?
ಚನ್ನೆ ರನ್ನೆ ಎಂಬ ಮಾತು
ಅಲ್ಲಿ ನುಡಿವರಿಲ್ಲವೆ?

೨೫