ಯಾಕೆನ್ನೋಳಿನಿತು ಕೃಪೆಯಿಲ್ಲ ಹರಿಯೆ

ವಿಕಿಸೋರ್ಸ್ದಿಂದ

ಯಾಕೆನ್ನೋಳಿನಿತು ಕೃಪೆಯಿಲ್ಲ ಹರಿಯೆ[ಸಂಪಾದಿಸಿ]

ರಾಗ: ಮುಖಾರಿ ತಾಳ: ಅಟ್ಟ
ಯಾಕೆನ್ನೋಳಿನಿತು ಕೃಪೆಯಿಲ್ಲ ಹರಿಯೆ
ಕಾಕುಮಾಡದೆ ಕಾಯೊ ಭವದೊಳಗೆ ಬಳಲಿದೆನು ||ಪಲ್ಲವಿ||

ಕಂದರ್ಪ ಬಾಧೆಯಿಂ ಮಾನಿನಿಯ ವಶನಾಗಿ
ಮಂದಮತಿಯಿಂದ ಬಲು ಮರುಳಾದೆನೊ
ಸಂದಿತೈ ಯೌವನವು ಬುದ್ಧಿ ಬಂದಿತು ಈಗ
ಸಂದೇಹಪಡದೆ ನೀ ಕರುಣಿಸೈ ಎನ್ನ || ೧ ||

ಹೆಂಡತಿಯು ಕಡೆಗಣ್ಣಿನಿಂದ ನೋಡುವಳೀಗ
ಹಿಂಡು ಮಕ್ಕಳು ಎನ್ನ ಕಾಡುತಿಹರು
ಮುಂಡಮೋಚಿದೆ ನಾನು ಇನ್ನಾರು ಗತಿ ಎನಗೆ
ಪುಂಡರೀಕಾಕ್ಷ ನೀ ಕರುಣಿಸೈ ಎನ್ನ || ೨ ||

ಅಟ್ಟ ಮೇಲೆ ಒಲೆಯು ಉರಿವಂತೆ ಎನಗೀಗ
ಕೆಟ್ಟ ಮೇಲೆ ಅರಿವು ಬಂದಿತಯ್ಯ
ನೆಟ್ಟನೆ ಪುರಂದರವಿಠಲನೆ ಕೈ ಬಿಡದೆ
ದೃಷ್ಟಿಯಿಂದಲಿ ನೋಡಿ ಪರಿಪಾಲಿಸಯ್ಯ || ೩ || [೧]
ರಚನೆ : ಪುರಂದರದಾಸರು.

ನೋಡಿ[ಸಂಪಾದಿಸಿ]

ಪರಿವಿಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ದಾಸವಾಣಿ