ವಿಷಯಕ್ಕೆ ಹೋಗು

ಪುಟ:ಜಾಗರ.pdf/೪೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೩೮ | ಜಾಗರ ಮೇಳಗಳು ತಲೆ ಎತ್ತಿದುವು. ಇದರ ಅಂಗ ಸಂಸ್ಥೆ, ಕರ್ನಾಟಕ ಕಲಾ ವಿಹಾರ ಸಂಘವೂ ಒಂದೆರಡು ಸಂಚಾರಗಳನ್ನು ಮಾಡಿತು.

ಸದ್ಯ ಕೆಲವು ವರ್ಷಗಳಿಂದ ಈ ಸಂಸ್ಥೆಯ ವ್ಯವಸ್ಥಾಪಕರು ಶ್ರೀ ಕೆ ವಿಠಲ ಶೆಟ್ಟಿ (ದಿ/ ಕೊರಗ ಶೆಟ್ಟರ ಪುತ್ರ) ಇವರು ಮಂಗಳೂರಲ್ಲಿ ಖಾಯಂ ಸಭಾ ಗೃಹವೊಂದನ್ನು ಕಟ್ಟಿಸಿ, ವಿಟ್ಲ ಬಾಬುರಾಯರು ರಚಿಸಿದ ಟ್ರಾನ್ಸ್‌ಫರ್‍ ಸೀನು, ಸೀನರಿಗಳೊಂದಿಗೆ ಆಟಗಳನ್ನು ಏರ್ಪಡಿಸಿದ್ದರು. ಪೊಳಲಿ ರಾಜರಾಜೇಶ್ವರಿ ಮೇಳ ವನ್ನು ಇವರು ನಡೆಸುತ್ತಿದ್ದಾಗ ಅರ್ಧರಾತ್ರಿ ತನಕ ಬಡಗುತಿಟ್ಟಿನ ಆ ಬಳಿಕ ತೆಂಕು ತಿಟ್ಟಿನ ಆಟಗಳನ್ನು ಆ ಮೇಳದಲ್ಲಿ ಪ್ರಯೋಗಿಸಿದರು.
ತುಳು ಕಥಾ ಭಾಗಗಳ ಆಟಗಳಲ್ಲಿ ಇರಾ - ಕರ್ನಾಟಕ ಮೇಳವೇ ಮೊದಲನೆಯದು. ಹಲವು ವಿವಾದಾಸ್ಪದ ಪ್ರಯೋಗಗಳನ್ನು ಮಾಡಿದರೂ, ದಿ| ಕೊರಗ ಶೆಟ್ಟಿ ಮತ್ತು ಶ್ರೀ ವಿಠಲ ಶೆಟ್ಟಿ ಇವರು ಯಕ್ಷಗಾನದ ಪ್ರೇಕ್ಷಕ ವರ್ಗ ಹೆಚ್ಚುವುದಕ್ಕೂ, ಕಲಾವಿದರ ಆರ್ಥಿಕಸ್ಥಿತಿ ಸುಧಾರಣೆಗೂ ಬಹುಮಟ್ಟಿಗೆ ಕಾರಣ ರಾಗಿದ್ದಾರೆ.

7.ಸಾಲಿಗ್ರಾಮ ಮೇಳ: -(ಗುರುಪ್ರಸಾದಿತ ಯಕ್ಷಗಾನ ಮಂಡಳಿ) ಸ್ಥಾಪಕರು ಶ್ರೀಗಳಾದ ಪಿ ಸೋಮನಾಥ ಹೆಗಡೆ, ಶ್ರೀಧರ ಹಂದೆ. ಈ ಮೇಳ ಆರಂಭವಾಗು ತ್ತಲೇ ಯಕ್ಷಗಾನದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿತು. ಉತ್ತರ ಕನ್ನಡದ ಕಲಾವಿದರನ್ನು ಪ್ರೇಕ್ಷಕರಿಗೆ ಪರಿಚಯಿಸಿದ್ದಲ್ಲದೆ, ಬಡಗು ತಿಟ್ಟಿನ ಪುನರುತ್ಥಾನಕ್ಕೆ ಈ ಮೇಳ ಮತ್ತು ಅಮೃತೇಶ್ವರಿ ಮೇಳ - ಕಾರಣವಾದುವು.
8 ಇತರ ಮೇಳಗಳು:- ಬಡಗು ತಿಟ್ಟಿನ ಮಂದರ್ತಿ ಮೇಳಕ್ಕೆ ತುಂಬ ಹರಕೆ ಆಟ ಗಳಿವೆ, ಕಮಲಶಿಲೆ, ಪೆರ್ಡೂರು, ಮಾರಣಕಟ್ಟೆ ಹಾಗೂ ತೆಂಕಿನ ಸುಂಕದಕಟ್ಟೆ ಮೇಳಗಳು ಹರಕೆ ಬಯಲಾಟದ ಇತರ ಮೇಳಗಳು.ಬಯಲಾಟದ ಮೇಳವಾಗಿದ್ದ ಅಮೃತೇಶ್ವರಿ ಮೇಳ ಈಗ ಟೆಂಟಿನ ಮೇಳವಾಗಿದೆ.
ಎಲ್ಲೆಡೆ ಜನಜೀವನ ಜಟಿಲವಾಗುತ್ತಿದೆ. ಸಮಯದ ಬೆಲೆ ದಿನ ದಿನ ಹೆಚ್ಚುತ್ತಿದೆ. ಹಣದುಬ್ಬರ ಬೆಲೆಯೇರಿಕೆಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಆದರೂ ಈ ಎರಡೂ ಜಿಲ್ಲೆಗಳಲ್ಲೇ ಸುಮಾರು ಹದಿನೆಂಟು ಮೇಳಗಳು ದಿನವೂ ಆಟಗಳನ್ನು ಆಡುತ್ತಿವೆ. ಟೆಂಟಿನ ಆ ಟ ಗ ಳಿಗೆ ಭಾರೀ “ಕಲೆ ಕ್ಷನ್” ಇದೆ. ಬಯಲಾಟಗಳಿಗೆ ಬೃಹತ್ ಸಭೆಗಳು ಸೇರುತ್ತವೆ. ಇದು ನನಗೊಂದು ಆರ್ಥಿಕ, ಸಾಮಾಜಿಕ ಪವಾಡವಾಗಿ ಕಾಣಿಸುತ್ತದೆ.