ಕಾರಂತರು. ಅವರು ಹಲವು ಗೋಷ್ಠಿ, ಸಮ್ಮೇಳನ, ಪ್ರಯೋಗಗಳ ಮೂಲಕ
ಸುಮಾರು ನಾಲ್ಕು ದಶಕಗಳ ಕಾಲ ಈ ರಂಗದಲ್ಲಿ ಮಹತ್ವದ ಕೆಲಸ ಮಾಡಿದ್ದಾರೆ.
ಈಗ ಯಕ್ಷಗಾನದ ಮೂಲಸಾಮಗ್ರಿಯನ್ನು ಉಪಯೋಗಿಸಿ, ಅದರಲ್ಲಿ ಹಲವು
ಪರಿವರ್ತನೆಗಳನ್ನು ಮಾಡಿ 'ಯಕ್ಷರಂಗ'ವೆಂಬ ಯಕ್ಷಬ್ಯಾಲೆ ತಂಡವೊಂದನ್ನು
ಕಟ್ಟಿದ್ದಾರೆ.
ಡಾ| ಕಾರಂತರ ಯತ್ನಗಳು ಮುಖ್ಯವಾಗಿ, ಬಡಗುತಿಟ್ಟಿಗೆ ಸೀಮಿತ
ವಾದುವು. ಅಲ್ಲೂ ಅವರ ಪ್ರಯೋಗಗಳಿಂದ ಯಕ್ಷಗಾನ ಹೆಚ್ಚು ಲಾಭ ಪಡೆ
ದಂತಿಲ್ಲವಾದರೂ, ಪರಂಪರೆಯ ಪ್ರಜ್ಞೆ ಬೇರೂರಲು ಅನುಕೂಲವಾಗಿದೆ.
ಯಕ್ಷಗಾನದ ಈ ಹತ್ತು ಹಲವು ಸಮಸ್ಯೆಗಳ ಪರಿಹಾರ ಸುಲಭದ ಕೆಲಸ
ಅಲ್ಲ. ಯಕ್ಷಗಾನ ಶೈಲಿಯ ಸಂರಕ್ಷಣೆ, ಪ್ರದರ್ಶನಗಳ ಸುವ್ಯವಸ್ಥೆ, ಕಲಾವಿದರ
ಹಿತರಕ್ಷಣೆಗಳ ಬಗ್ಗೆ ಮುಕ್ತ, ಪ್ರಾಮಾಣಿಕ ವಿಚಾರ ವಿನಿಮಯ ನಡೆಯಬೇಕಾಗಿದೆ.
ಈ ಬಗ್ಗೆ ಒಂದು ಯೋಜನಾ ಬದ್ಧ ಯತ್ನ, ಸ್ಥಾಯಿ ವ್ಯವಸ್ಥೆ ಮಾಡದಿದ್ದರೆ
ಯಕ್ಷಗಾನದ ಭವಿಷ್ಯ ಭದ್ರವಾಗದು. ಕಲಾವಿದರು, ಕಲಾಭಿಜ್ಞರು, ಮೇಳಗಳ
ಮಾಲೀಕರು - ಈ ಬಗ್ಗೆ ಯೋಚಿಸಬೇಕು.
ಎಲ್ಲ 'ಬೇಕು'ಗಳೂ ನಿಜ. ಇದರ ನಾಯಕತ್ವ ವಹಿಸಿ ಬೆಕ್ಕಿನ ಕೊರಳಿಗೆ
ಗಂಟೆ ಕಟ್ಟುವವರು ಯಾರು?
I ಗ್ರಂಥಋಣ
1. ಯಕ್ಷಗಾನ - (ಮೈಸೂರು ವಿಶ್ವವಿದ್ಯಾಲಯದ ಪ್ರಕಾಶಿತ)
ಡಾ/ಶಿವರಾಮ ಕಾರಂತ
2. ಯಕ್ಷಗಾನ ಪ್ರಭಾ - ತಾಳ್ತಜೆ ಕೃಷ್ಣ ಭಟ್ಟ
3. ಯಕ್ಷಗಾನ - (ಐ. ಬಿ. ಎಚ್. ಪ್ರಕಾಶನ)ಶ್ರೀ ಪಿ ವಿ ಹಾಸ್ಯಗಾರರ ಲೇಖನ
4. ಬಾಸಿಗ - (ದ. ಕ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಂಚಿಕೆ, ಕಾರ್ಕಳ)
5. ಪಾರ್ತಿ ಸುಬ್ಬನ ಯಕ್ಷಗಾನಗಳು - ಶ್ರೀ ಕುಕ್ಕಿಲ ಕೃಷ್ಣ ಭಟ್ಟ