ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೨೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೧೬ | ಜಾಗರ
ಹೆಚ್ಚು ಕಡಿಮೆ ಇಡಿಯ ಪ್ರಸಂಗ ಸಾಹಿತ್ಯ ಮಧ್ಯಯುಗೀನ, ಭಕ್ತಿಯುಗದ ತೀರ ಸರಳವಾದ ಮೌಲ್ಯ ಪ್ರಪಂಚವನ್ನು ಪ್ರತಿನಿಧಿಸುವುದರಿಂದ, ಉಪನಿಷತ್ತು, ಷಡ್‌ದರ್ಶನಗಳ ಯುಗದ, ಮೂಲ ರಾಮಾಯಣ ಭಾರತಗಳ, ಚಿಂತನದ ಪ್ರೌಢತೆ ಸಂಕೀರ್ಣತೆಗಳು ನಮ್ಮ ಪ್ರಸಂಗಗಳಲ್ಲಿ ಇಲ್ಲ. ಮನುಷ್ಯ ಜೀವನದ ಸಂಕೀರ್ಣ ಸಂದರ್ಭಗಳನ್ನು, ಹೆಚ್ಚು ವಿಸ್ತಾರವಾದ ಜೀವನ ದೃಷ್ಟಿಯನ್ನು ಚಿತ್ರಿಸಬಲ್ಲ ಪ್ರಸಂಗ ಸಾಹಿತ್ಯದ ಸೃಷ್ಟಿ ಯಕ್ಷಗಾನ ರಂಗದ ತುರ್ತಿನ ಅವಶ್ಯಕತೆಗಳಲ್ಲಿ ಒಂದು. ಶ್ರೀ ನಂಬಿಯಾರರೂ ಸೇರಿದಂತೆ, ಕೆಲವರು ಇಂತಹ ಯತ್ನ ಆರಂಭಿಸಿದ್ದಾರೆ.
ಗೋಷ್ಠಿಯಲ್ಲಿ ಮಂಡಿತವಾದ ಮೂರು ಪ್ರತಿಕ್ರಿಯೆಗಳು, ಅರ್ಥಗಾರಿಕೆ ಯನ್ನು ಮೂರು ಸ್ತರಗಳಲ್ಲಿ ವಿವೇಚಿಸುವ ಯತ್ನ ಮಾಡುತ್ತವೆ. ಇದರಿಂದ ಗೋಷ್ಠಿಯ ಒಟ್ಟು ಸ್ವರೂಪಕ್ಕೆ ವಿಭಿನ್ನ ಮುಖಗಳು ಒದಗಿ ಚರ್ಚೆ ಉಪಯುಕ್ತ ವಾಗಿದೆ. ಮೂರು ಪ್ರತಿಕ್ರಿಯೆಗಳಲ್ಲಿ ಶ್ರೀ ಉಚ್ಚಿಲರದು ನೇರವಾಗಿ ಪ್ರಬಂಧದ ಅಂಶಗಳಿಗೆ ಪ್ರತಿಕ್ರಿಯೆಯಾದರೆ, ಪೆರ್ಲ ಮತ್ತು ತೋಳ್ಪಾಡಿ ಅವರದು. ಪ್ರಬಂಧ ವನ್ನು ಓದಿದಾಗ, ಅರ್ಥಗಾರಿಕೆಯ ಬಗ್ಗೆ ಹೊಳೆದ ಸ್ವತಂತ್ರ ವಿಚಾರಗಳ ಮಂಡನೆ.
ಪೆರ್ಲ ಕೃಷ್ಣ ಭಟ್ಟರು ತಮ್ಮ ಸುವ್ಯವಸ್ಥಿತವಾದ ಬರಹದಲ್ಲಿ ಅರ್ಥದ ಅಷ್ಟಾಂಗಗಳ ಒಂದು ಪರಿಕಲ್ಪನೆಯನ್ನು ರಚಿಸಿ, ಅರ್ಥವನ್ನು ಅದರ ವ್ಯಾಪ್ತಿಯಲ್ಲಿ ವಿವೇಚಿಸಿದ್ದಾರೆ. ಆಟ ಮತ್ತು ತಾಳಮದ್ದಳೆಗಳ ಅರ್ಥಗಾರಿಕೆಯ ರೀತಿಗಳ ಬಗ್ಗೆ ಪೆರ್ಲರು ಒಂದು ಮಹತ್ವದ ಮೂಲಭೂತ ಅಂಶದತ್ತ ಬೆಟ್ಟು ಮಾಡಿದ್ದಾರೆ. ಆಟದ ಅರ್ಥ ಗಿಡ್ಡ ತಾಳಮದ್ದಳೆಯದು ಉದ್ದ ಎಂಬಷ್ಟೇ ಸರಳ ವಿವೇಚನೆ ಸಲ್ಲ, ಅದು ಸಣ್ಣ ಕತೆ ಮತ್ತು ಕಾದಂಬರಿಗಳು ಹೇಗೆ ಬರಿಯ ಪ್ರಮಾಣದಿಂದ ಮಾತ್ರ ಭಿನ್ನ ವಲ್ಲವೊ, ಹಾಗೆ ಎಂದು ಹೇಳಿರುವುದು, ತುಂಬ ಯುಕ್ತವಾದ ವಿವೇಚನೆ. ಆಟ ಕೂಟಗಳಲ್ಲಿನ ಮಾತುಗಾರಿಕೆಯಲ್ಲಿ ಮೂಲಭೂತವಾದ ಅಂತರವಿದೆ.
ಕಲೆಯಲ್ಲಿ ಬೋಧನಾಂಶ ಇದ್ದೇ ಇರುತ್ತದೆ ಎಂಬ ಪೆರ್ಲರ ಮತಕ್ಕೆ ಒಟ್ಟು ಸಾಹಿತ್ಯ ವಿಮರ್ಶೆಯ ಬಲ ಇದೆ. (ಬೋಧನಾಂಶ ಹೇಗೆ ಬರಬೇಕು ಎಂಬುದೇ ಪ್ರಶ್ನೆ) ಯಾವುದೇ ಸಾಹಿತ್ಯ, ಕಲೆ - ಕೆಲವೊಂದು ಮೌಲ್ಯ, ಚಿಂತನ, ಪ್ರಚೋದನೆಗಳನ್ನು ಕೊಡುತ್ತದೆ. ಆದರೆ ರಾಮಾದಿವತ್' ನ ತು ರಾವಣಾದಿ ವತ್ ಎಂಬಷ್ಟು ಸರಳವಾದ ಒಂದು ಪ್ರಚೋದನೆ ಸಾಕೆ, ಅಲ್ಲ ಆಳವಾದ ವೈಚಾರಿಕ ನೆಲೆಯ ಸ್ಫೂರ್ತಿಗಳನ್ನು ಕಲೆ ಒದಗಿಸಬೇಕೆ ಎಂಬುದನ್ನು ಯೋಚಿಸಬೇಕು. ಪೆರ್ಲರು ಸೂಚಿಸಿರುವ ಮಾತಿನ ಅಷ್ಟಾಂಗಗಳಲ್ಲಿ ಅಭಿನಯವೂ ಇರು ವುದು ಗ ಮ ನಾ ರ್ಹ ಅಂಶ ( ಈ ಅಂಶವನ್ನು ಉಳಿದ ಯಾರೂ ಪ್ರಸ್ತಾವಿಸಿಲ್ಲ) ಅರ್ಥಗಾರಿಕೆ ಹಿತವಾದ ಒಂದು ಪ್ರಮಾಣದ ಅಭಿನಯ (actions, gestures)