ಪುಟ:ಯಶೋಧರ ಚರಿತೆ.pdf/೧೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ



ಯಶೋಧರ ಚರಿತೆ

ಪ್ರೇರಣೆಯನ್ನು ಕೊಟ್ಟಿದೆ. ಇವನದು ಇತ್ತ ಕಯ್ಯಲ್ಲದೆ ಒಡ್ಡಿದ ಕಯ್ಯಲ್ಲ. ಇದೂ ಅಲ್ಲದೆ ತಾನು ರನ್ನನಂತೆ ವೈಯಾಕರಣನೂ ಪೊನ್ನನಂತೆ ಅಸಹಾಯ ಕವಿಯೂ ಆಗಿದ್ದುದನ್ನು ಅವನು ಹೇಳಿಕೊಂಡಿದ್ದಾನೆ.
ಜನ್ನನು ಚೆನ್ನರಾಯಪಟ್ಟಣದ ೧೭೯ನೆಯ ಶಾಸನವನ್ನೂ (ಕ್ರಿ. ಶ. ೧೧೯೧) ತರೀಕೆರೆಯ ೪೫ನೆಯ ಶಾಸನವನ್ನೂ (ಕ್ರಿ. ಶ. ೧೧೯೭) ಬರೆದನೆಂದು ಆಯಾ ಶಾಸನಗಳ ಅಂತ್ಯದ 'ಜನ್ನಯ್ಯನ ಕವಿತೆ' ಎಂಬ ಮಾತಿನಿಂದ ತಿಳಿದುಬರುತ್ತದೆ. ಅವನಿಗೆ ಸಾಹಿತ್ಯರತ್ನಾಕರ, ರಾಜವಿದ್ವತ್ಯಭಾಕಲಹಂಸ, ಕವಿ ವೃಂದಾರಕವಾಸವ, ಕವಿಕಲ್ಪಲತಾ ಮಂದಾರ ಮುಂತಾದ ಬಿರುದುಗಳಿವೆ. ಜನ್ನಮರಸ, ಜನ್ನಯ್ಯ ಜನ್ನಿಗ, ಜನಾರ್ದನ ಜಾನಕಿ ಮುಂತಾದ ಹೆಸರುಗಳಿಂದ ತನ್ನನ್ನು ಕರೆದುಕೊಂಡಿದ್ದಾನೆ.
ಮೇಲೆ ಹೇಳಿದ ಶಾಸನಗಳಲ್ಲದೆ, ಜನ್ನನು ಬರೆದುದು 'ಯಶೋಧರ ಚರಿತೆ' ಮತ್ತು 'ಅನಂತನಾಥ ಪುರಾಣ' ಎಂಬ ಗ್ರಂಥಗಳನ್ನು. ಸ್ಮರತಂತ್ರವೆಂಬ ಗ್ರಂಥವನ್ನೂ ಬರೆದಿದ್ದಾನೆಂದು ವಿದ್ವಾಂಸರು ಹೇಳುತ್ತಾರೆ. ಇವುಗಳಲ್ಲಿ ಅನಂತನಾಥ ಪುರಾಣವು ಹದಿನಾಲ್ಕನೆಯ ತೀರ್ಥಂಕರನಾದ ಅನಂತನಾಥನ ಚರಿತವಾಗಿದೆ. ಹದಿನಾಲ್ಕು ಆಶ್ವಾಸಗಳುಳ್ಳ ಈ ಕೃತಿ 'ಅರುಹನ ಮೂರ್ತಿಯಂತಿರೆ ನಿರಾಭರಣ'ವಾಗಿ ಮೆರೆಯುವುದೆಂದು ಹೇಳಿದ್ದಾನೆ. ಆದರೆ ಅನೇಕ ಅಲಂಕಾರಗಳು ಕಾವ್ಯದಲ್ಲಿ ಬರುತ್ತವೆ. ಇದು ಮುಖ್ಯವಾಗಿ ಧಾರ್ಮಿಕ ಕಥೆಯಾಗಿದ್ದು, ಮಧ್ಯದಲ್ಲಿ ಬರುವ 'ಚಂಡಶಾಸನನ ಕಥೆಯಿಂದ ಇದು ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ. ಇದನ್ನು ಇವರು ಕ್ರಿ. ಶ.೧೨೩೦ರಲ್ಲಿ ಬರೆದು ಮುಗಿಸಿದನೆಂದು ಈ ಗ್ರಂಥದ ಅಂತ್ಯದಲ್ಲಿ ಬರುವ ಈ ಕೆಳಗಣ ಪದ್ಯದಿಂದ ಗೊತ್ತಾಗುತ್ತದೆ:

         ಶಕಸಂವತ್ಸರಮಂದು ಸಾಸಿರದ ನೂರೈವತ್ತೆರಟ್ಟಿನಂ
               ವಿಕೃತಾಬ್ದಂ ಬರೆ ಚೈತ್ರಶುದ್ಧ ದಶಮೀ ದೇವೇಜ್ಯನೊಳ್ಳುಷ್ಯತಾ
               ರಕದೊಳ್ಳಾಡಿಸಿದಂ ಪ್ರತಿಷ್ಠೆಯನನಂತ ಶ್ರೀ ಮುರಾಣಕ್ಕೆ ಕ
               ಮೈಕುಲಾಂಭೋರುಹಭಾನು ಜನ್ನಮರಸಂ ಸಾಹಿತ್ಯರತ್ನಾಕರಂ

(ಅ xiv; ಪ ೮೪)
೨. ಕಾವ್ಯ
ಯಶೋಧರ ಚರಿತೆಯೇ ಪ್ರಕೃತ ವಿಚಾರಕ್ಕೆ ಒಳಗಾಗಬೇಕಾದ ಗ್ರಂಥ.