ಪುಟ:ಯಶೋಧರ ಚರಿತೆ.pdf/೨೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ

ಅವಳೂ ಇಂಪಾದ ಹಾಡು ಹಾಡುವವನು ಅತ್ಯಂತ ಸುಂದರವಾಗಿದ್ದಿರಬಹುದೆಂದು
ಕಲ್ಪಿಸಿರಬಹುದು.
ಅಮೃತಮತಿಯ ಕೆಳದಿ ಅವನನ್ನು ನೋಡಿ ಬಂದು ಆ ರೂಪಾಧಮನ
ವರ್ಣನೆಯನ್ನು ಮಾಡಿದಾಗ, ಅಮೃತಮತಿ ಒಮ್ಮೆ ವಿಹ್ವಲೆಯಾದಳು ನಿಜ.
ಆದರೆ 'ಮೆಚ್ಚಿದವರಿಗೆ ಮಸಣ ಸುಖ' ಎಂಬಂತೆ ಅವಳು 'ಪೊಲ್ಲಮೆಯೆ
ಲೇಸು ನಲ್ಲರ ಮೆಯ್ಯೊಳು'ಎನ್ನುತ್ತಾಳೆ. ಇನ್ನೂ ಮುಂದುವರಿಸಿ 'ಒಲವಾದೊಡೆ
ರೂಪಿನ ಕೋಟಲೆಯೇವುದೊ' ಎನ್ನುತ್ತಾಳೆ. ಇದರಿಂದ ಕೂಡ ಯಶೋಧರನ
ರೂಪದಲ್ಲಿ ಅವಳಿಗೆ ಒಲವಾಗಿರಲಿಲ್ಲ, ಏಕೆಂದರೆ ಅವನಲ್ಲಿ ಪೊಲ್ಲಮೆಯೆ ಇಲ್ಲ
ಎಂದು ಹೇಳಿದಂತಾಗುತ್ತದೆ. ಹಾಗೆಂದು ಅವಳಿಗೆ ಆ ವಿಕಟಾಂಗನಲ್ಲಿ
ರತಿಫಲಾಸ್ವಾದನದಲ್ಲಿ ರುಚಿಯಾಯಿತಂತೆ! ಅವಳಿಗೆ ಬರಿಯ ಕಾಮ ತೃಪ್ತಿಯ
ಕಡೆಗೆ ಒಲವಿದ್ದಿತೇ ಹೊರತು ರೂಪ-ಗುಣಗಳ ಕಡೆಗೆ ಒಲವಿರಲಿಲ್ಲ. ಆ ತೃಪ್ತಿ
ಅಷ್ಟವಂಕನಿಂದ ದೊರೆಯುವ ನಿರೀಕ್ಷೆ ಅವಳದು.


ಅಷ್ಟವಂಕನು ಎಷ್ಟು ಕುರೂಪಿಯೊ ಮತ್ತು ಎಷ್ಟು ಕುತ್ಸಿತನೊ ಅಷ್ಟೇ
ಕ್ರೂರನೂ ಹೌದು. ಅಮೃತಮತಿ ಈ ಜಾರನಲ್ಲಿಗೆ ಬಂದಾಗ ಒಮ್ಮೆ
ವಿಲಂಬವಾದುದಕ್ಕೆ ಆತನು ಅವಳ ಸ್ಥಾನ-ಮಾನ-ರೂಪ-ಯೌವನ ಮುಂತಾದ
ಯಾವುದನ್ನೂ ಲೆಕ್ಕಿಸದೆ– ಅವಳ ಮೇಲೆ ಒಂದಿಷ್ಟು ಒಲವಿಲ್ಲದೆ– ಅವಳ
ಸೌಕುಮಾರ್ಯವನ್ನು ಗಣನೆಗೆ ತಾರದೆ ಅವಳ 'ಕುರುಳ್ಗಳನೆಳೆದು ಬೆನ್ನ ಮಿಳಿಯಂ
ಕಳಹಂಸೆಗೆ ಗಿಡಿಗನೆರಗಿದಂತಿರೆ' ಬಡಿದನು, ಇಷ್ಟೇ ಅಲ್ಲ 'ತೋರ ಮುಡಿವಿಡಿದು
ಕುಡಿಯಂ ನಾರಂ ತದೆನಂತೆ ತದೆದು, ಬೀಟೆಯ ಕಾಲಿಂದ ಬಾರೇಳೆ”
ಬದಗನೊದೆದನು. ಇಂತಹ ಕ್ರೌರ್ಯವೂ ದಯಾಶೂನ್ಯತೆಯೂ ಅವನ ಆಕಾರಕ್ಕೆ,
ಸಂಸ್ಕಾರಕ್ಕೆ ಹುಟ್ಟಿಗೆ ತಕ್ಕುದಾದದ್ದೇ. ಆದರೆ ಅವಳು ಆಗಲೂ ಕೇರೆ ಪೊರಳ್ವಂತೆ
ಅವನ ಕಾಲಮೇಲೆ ಪೊರಳ್ದಳು. ಅವಳಿಗೆ ಯಶೋಧರನು 'ಅರಸೆಂಬ ಪಾತಕ'ನಾಗಿ
ಬಿಟ್ಟಿದ್ದಾನೆ. ಗಜವೆಡಂಗನಾದ ಅಷ್ಟವಂಕನ ದನಿ ಅವಳ ಕಿವಿಗೆ ಸವಿಯಾಗಿಯೂ
ಅವನ ರೂಪು ಅವಳ ಕಣ್ಣಿಗೆ ಸವಿಯಾಗಿಯೂ ಇವೆಯೆನ್ನುತ್ತಾಳೆ. ಅವನ
ಕರ್ಣಾನಂದಕರವಾದ ಗೀತಕ್ಕೆ ಅವಳು ಸೋತುಹೋದುದು ನಿಜವಾದರೂ,
ಆಮೇಲೆ ಅವನ ಗೀತವನ್ನು ಅವಳು ಕೇಳಿದುದಾಗಲಿ, ಅವನು ಹಾಡಿದುದಾಗಲಿ
ಇಲ್ಲವೇ ಇಲ್ಲ. ಎಂದ ಮೇಲೆ ಆಕೆ ಯಶೋಧರನಲ್ಲಿ ಅನುರಕ್ತೆಯಾಗಿ ಇರಲೇ
ಇಲ್ಲ; ಅವಳು ಮೊದಲು ಮೋಹಗೊಂಡುದು ಬದಗನ ಹಾಡಿನ ಸಕೃಚ್ಚಶ್ರವಣಕ್ಕೆ;
ಅನಂತರ ಅವನ ವಕ್ರಾಕಾರವನ್ನು ಕಣ್ಣಿಗೆ ಸವಿಯೆಂದು ಸಮಾಧಾನ