ಪುಟ:ಯಶೋಧರ ಚರಿತೆ.pdf/೩೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ

೨೫


ಆ ಪುರದ ತೆಂಕವಂಕದೊ-
ಳಾಪೊತ್ತಮನೇಕ ಜೀವಹತಿ ತನಗೆ ಸುಖೋ-
ದ್ದೀಪನಮೆನಿಸುವ ಪಾಪಕ-
ಳಾಪಂಡಿತೆ ಚಂಡಮಾರಿದೇವತೆಯಿರ್ಪಳ್ ೩೪

ತನಗರಸುವೆರಸು ಪುರಜನ
ಮನಿತುಮಿಷಂ ಚೈತ್ರಮೆಂಬ ತಿಂಗಳೊಳಖಿಳಾ-
ರ್ಚನೆವೆರಸು ಜಾತ್ರೆ ನೆರೆಯದೊ-
ಡನಿತುಮ ನೊರ್ಮೊದಲೆ ವಿಳಯದೊಳ್ ನೆರೆಯಿಸುವಳ್ ೩೫

ಆ ದೇವಿಯ ಜಾತ್ರೆಗೆ ಮೊಳೆ
ವೋದೆಳವೆಳೆ ಸಿರದ ಗಾಳಮುರಿಯುಯ್ಯಲೆ ಕೈ-
ವೋದಸುಕೆ ಕೋಕಿಲಧ್ವನಿ
ಮೂದಲೆಯುಲಿಯಾಗೆ ಬಂದುದಂದು ಬಸಂತಂ ೩೬



೩೪. ಆ ರಾಜಪುರದ ದಕ್ಷಿಣ ಪಾರ್ಶ್ವದಲ್ಲಿ ನೆಲಸಿದ್ದಾಳೆ ಚಂಡಮಾರಿ ಎಂಬ
ಹೆಸರಿನ ದೇವತೆ. ಯಾವಾಗಲೂ ಅನೇಕ ಜೀವಿಗಳ ಹತ್ಯೆಯೇ ಅವಳಿಗೆ
ಸುಖೋದ್ದೀಪನ ಎನಿಸಿದೆ. ಪಾಪದ ಕಲೆಯಲ್ಲಿ ಒಳ್ಳೆಯ ಪಾಂಡಿತ್ಯ ಅವಳದು.
೩೫. ಆ ನಗರದ ಜನರೆಲ್ಲರೂ, ತಮ್ಮ ರಾಜನನ್ನು ಮುಂದುಮಾಡಿಕೊಂಡು,
ಅಶ್ವಯುಜ ಮತ್ತು ಚೈತ್ರಮಾಸಗಳಲ್ಲಿ ಅಲ್ಲಿ ಜಾತ್ರೆ ಸೇರಬೇಕು; ಎಲ್ಲ ಬಗೆಯ
ಪೂಜೆಗಳನ್ನೂ ಮಾಡಬೇಕು. ಹಾಗೆ ನೆರವೇರಿಸದಿದ್ದಲ್ಲಿ ಆ ದೇವತೆ ಅಷ್ಟು
ಮಂದಿಯನ್ನೂ ಒಮ್ಮೆಲೇ ಸಂಪೂರ್ಣ ಧ್ವಂಸಗೊಳಿಸಿಯಾಳು. ೩೬. ಒಮ್ಮೆ
ಚೈತ್ರಮಾಸವು ಬಂದಿತು. ಮೂಡಿ ಬಂದ ಬಾಲಚಂದ್ರನೇ ದೇವಿಯ ಅರ್ಚನೆಗಾಗಿ
ಬಳಸುವ ತಲೆಯ ಗಾಳದಂತಿರಲು, ಚಿಗುರಿದ ಅಶೋಕದ ಮರವು ಬೆಂಕಿಯ
ಉಯ್ಯಾಲೆಯಾಗಿರಲು ಕೋಗಿಲೆಗಳ ಕೂಗುವ ಧ್ವನಿಯೇ ಮೂದಲೆಯ
ಮಾತಾಗಿರಲು ವಸಂತ ಋತುವು ಬಂದಿತು.೧೫ ೩೭. ಆ ದೇವಿಗೆ