ಪುಟ:ನವೋದಯ.pdf/೨೦೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

518

ಸೇತುವೆ

ದ್ವಿತೀಯ ಮುದ್ರಣದಲ್ಲಿ

ಮೊದಲ ಮಾತು

(ಮೊದಲ ಮುದ್ರಣದ ಮುನ್ನುಡಿಯಿಂದ ಪೂರ್ವಾರ್ಧವನ್ನು ಉದ್ಧರಿಸಿ,
ಮುಂದುವರಿಸಿದ್ದು)

****

ಇಂತಹ ಚಿತ್ರಣವನ್ನು ಓದುಗರ ಮುಂದಿರಿಸಿದಾಗ, ಒಳಗೊಂದು ಅಳುಕು
ನನ್ನನ್ನು ಬಾಧಿಸುತ್ತಿತ್ತು. ಆ ಅಳುಕಿಗೆ ಕಾರಣವಿಷ್ಟೆ. ವಿಚಾರದ ಅಂಶವೂ ಕಲೆಯ
ಅಂಶವೂ ಸೃಷ್ಟಿ ಸಾಹಿತ್ಯದಲ್ಲಿ ಸರಿಸಮಾನವಾಗಿರಬೇಕೆಂಬ-ಸಮರಸಗೊಂಡಿರಬೇಕೆಂಬ-
ಅಭಿಪ್ರಾಯ ಕನ್ನಡದಲ್ಲಿ ತೀರಾ ಇತ್ತೀಚಿನದು. ನಮ್ಮಲ್ಲಿ ವಿಪುಲವಾಗಿ ಸೃಷ್ಟಿಯಾಗು
ತ್ತಿರುವುದು, ಮನೋರಂಜನೆಯೊಂದೇ ಗುರಿಯಾಗುಳ್ಳ ಸಾಹಿತ್ಯ. ಓದುಗರ ಅಭಿ
ರುಚಿ ಹೆಚ್ಚಾಗಿ ರೂಪುಗೊಂಡಿರುವುದೂ ఆ ದಿಕ್ಕಿನಲ್ಲೇ. ಹೀಗಿರುತ್ತ, ಸಿಹಿ ಎಂದು
ನಾಲಗೆ ಚಪ್ಪರಿಸುವವರಿಗೆ ಶುಂಠಿಸಕ್ಕರೆಯನ್ನು ಕೊಡಲು ಹೊರಡುವುದು ಸುಲಭದ
ಕೆಲಸ ಹೇಗಾದೀತು?
ಆದರೆ ಕನ್ನಡ ಓದುಗರು ಆ ಭಯವನ್ನು ಬಹಳ ಮಟ್ಟಿಗೆ ನಿವಾರಣೆ ಮಾಡಿರು
ವರೆನ್ನುವುದು ವಿಚಾರಪರರೆಲ್ಲರಿಗೂ ಸಮಾಧಾನದ ವಿಷಯ; ಮನೋರಂಜನೆಯ
ಜತೆಗೆ ವಿಚಾರ ಪ್ರಚೋದನೆಯನ್ನೂ ಮಾಡಬಯಸುವ ಬರೆಹಗಾರರೆಲ್ಲರಿಗೂ
ಸಂತೋಷದ ವಿಷಯ. 'ದೂರದ ನಕ್ಷತ್ರ'ವನ್ನು ಕುರಿತು 'ಸಪ್ಪೆ' ಎಂದು ಹೇಳಿದವರಿ
ಗಿಂತಲೂ ಒಪ್ಪಿಗೆ ಸೂಚಿಸಿದವರ ಸಂಖ್ಯೆಯೇ ಹೆಚ್ಚಿನದು. ಅದನ್ನು ಓದಿರುವ
ಉಪಾಧ್ಯಾಯರು ಯಾರೂ "ಇದು ನಮ್ಮ ಕಥೆಯಲ್ಲ," ಎಂದು ಹೇಳಿಲ್ಲ. "ಬರೆ
ದಿರುವುದೊಂದು, ವಸ್ತು ಸ್ಥಿತಿ ಇನ್ನೊಂದು, ಎಂಬ ಅಭಿಪ್ರಾಯವನ್ನು ವ್ಯಕ್ತ
ಪಡಿಸಿಲ್ಲ.
ಓದುಗರು, ಸೃ ಷ್ಟನೆಯ ಸಾಹಿತ್ಯವನ್ನು ಬದುಕಿನಲ್ಲಿರುವ ಮೂಲದೊಡನೆ
ಹೋಲಿಸಿನೋಡುವ ಪ್ರವೃತ್ತಿಯೂ ಹೊಸದು. ಇಂಥವರ ಸಂಖ್ಯೆ ಸಣ್ಣದಾದರೂ
ತೃಪ್ತಿಕರವಾದುದು. ಬದುಕಿಗೂ ಸಾಹಿತ್ಯಕ್ಕೂ ನಿಕಟ ಸಂಬಂಧವಿದೆ ಎನ್ನುವ ವಿಚಾರ,
ದಿನದಿಂದ ದಿನಕ್ಕೆ ಬಡಕಲಾಗುತ್ತಿಲ್ಲ ಬೆಳೆಯುತ್ತ ಸಾಗಿದೆ...
'ದೂರದ ನಕ್ಷತ್ರ'ವನ್ನು ನಾನು ಬರೆದು ಮುಗಿಸಿದಾಗ, 'ಇದು ಅಪೂರ್ಣ'
ಎನ್ನುವ ಭಾವನೆ ನನ್ನಲ್ಲಿ ಮೂಡಿ ಬಲಗೊಂಡಿತು. ಹಲವಾರು ಓದುಗರೂ ಅದೇ
ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದ್ಯಾಭ್ಯಾಸವನ್ನು ಪೂರ್ತಿಗೊಳಿಸಲೆಂದು
ನಗರಕ್ಕೆ ಹಿಂತಿರುಗಿದ ಜಯದೇವ, ಪುನಃ ಆ ಹಳ್ಳಿಗೆ ಮರಳುವನೆ? ಅದೇ ವೃತ್ತಿ
ಯನ್ನು ಕೈಗೊಳ್ಳುವನೆ? ಎಂದು ಅವರು ನನ್ನನ್ನು ಕೇಳಿದರು.
ಆ ಪ್ರಶ್ನೆಗಳಿಗೆ ಉತ್ತರ, ನನ್ನ ಇತ್ತೀಚಿನ ಕಾದಂಬರಿಯಾದ 'ನವೋದಯ.'