ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ,

ವಿಕಿಸೋರ್ಸ್ದಿಂದ


Pages   (key to Page Status)   

ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ
ತೃಷೆಯಾಯಿತ್ತೆಂದು ಮಜ್ಜನಕ್ಕೆರೆವರಯ್ಯಾ
ಹಸಿವು ತೃಷೆ ವಿಷಯಕ್ಕೆ ಬಳಲುವರಯ್ಯಾ. ಹಸಿವಾಯಿತ್ತೆಂದು ಅರ್ಪಿತವ ಮಾಡಲಿಲ್ಲ
ತೃಷೆಯಾಯಿತ್ತೆಂದು ಮಜ್ಜನಕ್ಕೆರೆಯಲಿಲ್ಲ
ಇದು ಕಾರಣ ಕೂಡಲಸಂಗಮದೇವ ಪೂಜಿಸಿ
ಪ್ರಸಾದವ ಹಡೆವರೊಬ್ಬರೂ ಇಲ್ಲ.