ಮುತ್ತು ಉದಕದಲಾಗದು, ಉದಕ

ವಿಕಿಸೋರ್ಸ್ದಿಂದ


Pages   (key to Page Status)   

ಮುತ್ತು ಉದಕದಲಾಗದು
ಉದಕ ಮುತ್ತಿನಲಾಗದು
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕ್ಕಲ್ಲದೆ. ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.