ಜೈಮಿನಿ ಭಾರತ/ಇಪ್ಪತ್ತೊಂದನೆಯ ಸಂಧಿ
ಇಪ್ಪತ್ತೊಂದನೆಯ ಸಂಧಿ[ಸಂಪಾದಿಸಿ]
ಪದ್ಯ :ಸೂಚನೆ:[ಸಂಪಾದಿಸಿ]
ಸೂಚನೆ-: ತನಯರೊಳ್ ಕಾದಿ ಮೂರ್ಛಿತನಾದ ರಾಮನಂ | ಮುನಿಮೌಳಿ ವಾಲ್ಮೀಕಿ ಬಂದು ಸಂತೈಸಲ್ಕೆ | ವಿನುತಾಶ್ವಮೇಧಮಂ ಪೂರೈಸಿ ಸೀತೆಸಹಿತವನಿಯಂ ಪಾಲಿಸಿದನು || |
[ಆವರಣದಲ್ಲಿ ಅರ್ಥ];=
|
ಪದ್ಯ :೧:[ಸಂಪಾದಿಸಿ]
ಅರಸ ಕೇಳ್ ಜಾಹ್ನವಿಯ ತೀರದೊಳ್ ದೀಕ್ಷೆಗೊಂ | ಡಿರುತಿರ್ದ ರಾಘವಂ ಚಿತ್ತದನುತಾಪದಿಂ | ಭರತನಂಕರೆದು ಶತ್ರುಘ್ನನೇಗೈದನೆಂಬುದನುಸಿರ್ವರಾರುಮೆನಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೨:[ಸಂಪಾದಿಸಿ]
ಕನಸಿನೊಳ್ ಸೋಲ್ದುದಿಲ್ಲಾರ್ಗೆಯುಂ ಲಕ್ಷ್ಮಣಂ | ವನಚಾರಿ ಬಾಲಕರ ಪಾಡಾವುದೀಗ ಮುಳಿ | ದನುವರದೊಳಿರ್ವರಂ ಘಾತಿಸದೆ ಸಮ್ಮೋಹನಾಸ್ತ್ರದೊಳ್ ಮರವೆಗೊಳಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :೩:[ಸಂಪಾದಿಸಿ]
ದೇವ ಬಿಡು ದೀಕ್ಷೆಯಂ ಕಾದು ನಡೆ ಕುಶನೊಳ್ ಮ | ಹಾವಿರನಾತನಾ ಲವನಿಂದೆ ಬಲ್ಲಿದಂ | ಜೀವಸಂದೇಹಮಾಗಿರ್ಪುದೈ ಶತ್ರುಘ್ನ ಲಕ್ಷ್ಮಣರ್ಗಳಸೇನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪:[ಸಂಪಾದಿಸಿ]
ಬಳಿಕ ಶೈತ್ಯೋಪಚಾರಂಗಳಿಂ ಭರತನಿನ | ಕುಲಸಾರ್ವಭೌಮನಂ ಸಂತೈಸುತಿರೆ ಮೂರ್ಛೆ | ತಿಳಿದೆದ್ದು ಲಕ್ಷ್ಮಣನದಾವಡೆಯೊಳೆನ್ನ ಸೊಲ್ಸಲಿಸುವನದಾವೆಡೆಯೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :೫:[ಸಂಪಾದಿಸಿ]
ಜಾನಕಿಯನಂದು ಪೊರಮಡಿಸಿದನ್ಯಾಯದಿಂ | ಭಾನುಕುಲ ಸಂಭವಂಗಾದುವಿಂತೀತೆರದ | ಹಾನಿಗಳ್ ಸೌಮಿತ್ರಿ ಶತ್ರುಘ್ನರಂ ಜಯಿಸುವಗ್ಗಳೆಯರಾರ್ ಜಗದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :೬:[ಸಂಪಾದಿಸಿ]
ಸೀತಾವದನಚಿಹ್ನೆಮೆನ್ನಂಗದಾಕಾರ | ಮಾ ತಾಪಸಾರ್ಭಕರೊಳಿರ್ದಪುದು ಗಡ ಪಡೆದ | ಮಾತೆಯೆಲ್ಲಿರ್ದಪಳೊ ಕದುರೆಯಂ ಕಟ್ಟುವದಟೆತ್ತಣದಿವರ್ಗೆಂಬುದ || |
[ಆವರಣದಲ್ಲಿ ಅರ್ಥ];=
|
ಪದ್ಯ :೭:[ಸಂಪಾದಿಸಿ]
ಇಂತಿಂತಳಲ್ದಾಗ ಬಿಸುಸುಯ್ದೊಡನೆ ರಾಘ | ವಂ ತನ್ನ ಸಹಜರ ಗುಣಂಗಳಂ ನೆನೆನೆನೆದು | ಚಿಂತಿಸುತಿರೆ ಮತ್ತೆ ಕುಶನ ಶರಘಾತಿಯಿಂದುರೆ ನೊಂದು ಭೀತಿಗೊಂಡು || |
[ಆವರಣದಲ್ಲಿ ಅರ್ಥ];=
|
ಪದ್ಯ :೮:[ಸಂಪಾದಿಸಿ]
ಮೊರೆವೇಳ್ದ ದೂತರಂ ಗರ್ಜಿಸುತೆ ರಾಘವಂ | ಗೆರಗಿ ಕೈಮುಗಿದು ಭಯವಿಹ್ವಲರ್ ಚಾರರಿವ | ರರಿದಪೆರೆ ಸೌಮಿತ್ರಿ ಶತ್ರುಘ್ನರಾಹವಶ್ರಮದಿಂದೆ ತನು ಮನವನು || |
[ಆವರಣದಲ್ಲಿ ಅರ್ಥ];=
|
ಪದ್ಯ :೯:[ಸಂಪಾದಿಸಿ]
ಬಳಿಕ ಜಾಂಬವ ಸುಷೇಣಾಂಗದ ಹನೂಮಂತ | ನಳ ನೀಲ ಕುಮುದ ಶತಬಲಿ ಗವಯರೆಂಬ ಕಪಿ | ಗಳ ಪಡೆಯನೆಲ್ಲಮಂ ಬಲದೊಳುಳಿದಖಿಳ ಚತುರಂಗಮಂ ಕೂಡಿಕೊಟ್ಟು || |
[ಆವರಣದಲ್ಲಿ ಅರ್ಥ];=
|
ಪದ್ಯ :೧೦:[ಸಂಪಾದಿಸಿ]
ಧೀಂಕಿಟ್ಟನಲ್ಲಿಂದೆ ಕಲಿಹನುಮ ನಾರಣದೊ | ಳಂಕಿತದ ಕುಶನ ಬಾಣಂಗಳಿಂ ಮಡಿದ ಬಲ | ಸಂಕುಲವನಿಕ್ಷ್ವಾಕುನಂದನಂ ನಿನ್ನ ಸುತೆ ಸೀತೆಯಂ ಬಿಟ್ಟನೆಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :೧೧:[ಸಂಪಾದಿಸಿ]
ಕಂಡು ಕಪಿವೀರನವರೀರ್ವರಂ ತೆಗೆದೆತ್ತಿ | ಕೊಂಡು ಭರತನ ಪೊರೆಗೆ ತರಲವಂಬಳಿಕ ಮಣಿ | ಮಂಡಿತ ವರೂಥದೊಳವರ್ಗಳಂ ಪಟ್ಟಿರಿಸಿ ಹಯಮಂ ಕದಳಿಗೆ ಕಟ್ಟಿ || |
[ಆವರಣದಲ್ಲಿ ಅರ್ಥ];=
|
ಪದ್ಯ :೧೨:[ಸಂಪಾದಿಸಿ]
ಅಣ್ಣತಮ್ಮಂದಿರೀರ್ವರು ಮರಿಚತುರ್ಬಲಂ | ಪಣ್ಣಿ ಬರೆ ಕಂಡು ಬಿಲ್ಗೊಂಡೆದ್ದು ಕೋಪದಿಂ | ದಣ್ಣೆಕಲ್ಲಾಡಿದರ್ ಪಟುಭಟರ ತಲೆಗಳಂ ಬಾಣಪ್ರಯೋಗದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೧೩:[ಸಂಪಾದಿಸಿ]
ಚಾಪ ಟಂಕಾರಂ ಜಗತ್ತ್ರಯದೊಳೆಲ್ಲಿಯುಂ | ವ್ಯಾಪಿಸಲ್ ಕಿವುಡಾದುವಷ್ಟದಿಗ್ಧಂತಿಗ | ಳ್ ಭೂಪಯೋಧಿಗಳೊಡೆವೆರಸಿದುವು ಕುಲಾದ್ರಿಗಳ್ ಜರಿದುವಹಿ ಕಂಪಿಸಿದನು || |
[ಆವರಣದಲ್ಲಿ ಅರ್ಥ];=
|
ಪದ್ಯ :೧೪:[ಸಂಪಾದಿಸಿ]
ಕೋಲ್ಗರೆಯಲಾನೆಗಳ ಸುಂಡಿಲ್ಗಳುಂ ಹಯದ | ಕಾಲ್ಗಳುಂ ರಾವುತರ ಜೋದರ ಶಿರಂಗಳುಂ | ಮೇಲ್ಗೈದು ರಥಿಕರ ಧನುರ್ದಂಡಮಂ ಕೈದುವಿಡಿದ ಪಾಣಿಗಳುಮಿಳೆಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೧೫:[ಸಂಪಾದಿಸಿ]
ಸೇನೆಯಂ ನಿಮಿಷದೊಳ್ ತಡೆಗಡಿಯೆ ಕಂಡು ಪವ | ಮಾನಜಂ ನಡೆತಂದು ಬಾಲಕರ ವಿಗ್ರಹಂ | ಭಾನುಕುಲತಿಲಕನಾಕೃತಿವೊಲಿದೆ ನೋಡೆಂದು ಭರತಂಗೆ ತೋರಿಸಲ್ಕೆ|| |
[ಆವರಣದಲ್ಲಿ ಅರ್ಥ];=
|
ಪದ್ಯ :೧೬:[ಸಂಪಾದಿಸಿ]
ವತ್ಸ ನೀನಾರವಂ ನಿನಗೀತನೇನಹಂ | ಮತ್ಸಹೋದರರನುರೆ ಘಾತಿಸಿದಿರೆಮ್ಮೆಯ ಮ | ಹತ್ಸೈನ್ಯಮಂ ಕೊಂದಿರಿನ್ನಾದೊಡಂ ಕುದುರೆಯಂ ಬಿಟ್ಟು ಪೋಗಿ ಬರಿದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೧೭:[ಸಂಪಾದಿಸಿ]
ಕಟ್ಟಿದ ತುರಂಗಮಂ ಬಿಡುವನಲ್ಲೀತನೊಡ | ಹುಟ್ಟಿದಂ ತನಗೆ ವಾಲ್ಮೀಕಿಮುನಿವರನವರ್ | ನೆಟ್ಟನೆ ರಣಾಗ್ರದೊಳ್ ನಿನ್ನನುಂ ನಿನ್ನನುಜರಂತೆ ಘಾತಿಸಿದ ಬಳಿಕ || |
[ಆವರಣದಲ್ಲಿ ಅರ್ಥ];=
|
ಪದ್ಯ :೧೮:[ಸಂಪಾದಿಸಿ]
ಭರತನಂ ಗಣಿಸದಿಸುತಿರೆ ಕಂಡು ಮತ್ತೆ ಕರಿ | ತುರಗ ರಥ ಪಾಯದಳ ಮೊತ್ತಿದುದು ಕೂಡೆ ವಾ | ನರ ಸಿಂಗಳೀಕ ಮುಸು ಕರಡಿಯ ಬಲಂ ಮುತ್ತಿದುದು ಬಳಿಕ ನಸುನಗುತೆ ಕುಶನು ||
|
[ಆವರಣದಲ್ಲಿ ಅರ್ಥ];=
|
ಪದ್ಯ :೧೯:[ಸಂಪಾದಿಸಿ]
ಹತ್ತು ಭರತನ ಮೇಲೆ ನಳನ ಮೇಲೆಂಟು ಮೂ | ವತ್ತು ಹನುಮನಮೇಲೆ ಜಾಂಬವನಮೇಲೆ ನಾ | ಲ್ವತ್ತಂಗದನಮೇಲೆ ತೊಂಬತ್ತು ನೀಲ ಕುಮುದರ ಮೇಲೆ ನೂರುನೂರು || |
[ಆವರಣದಲ್ಲಿ ಅರ್ಥ];=
|
ಪದ್ಯ :೨೦:[ಸಂಪಾದಿಸಿ]
ಎಲ್ಲಿ ಕುಶನಂಬು ಸೋಂಕಿದುವಲ್ಲಿ ಮೂರ್ಛೆ ಮೃತಿ | ಯಲ್ಲದುಳಿವಿಲ್ಲ ಪಡೆಯೆಲ್ಲಮಂ ತಲ್ಲಣಿಸಿ | ಚೆಲ್ಲಿದುದು ದೆಸೆದೆಸೆಗೆ ಬಲ್ಲಿದ ಕಪೀಶ್ವರರ್ ಕೈಗೆಟ್ಟು ಮೈಮರೆದರು || |
[ಆವರಣದಲ್ಲಿ ಅರ್ಥ];=
|
ಪದ್ಯ :೨೧:[ಸಂಪಾದಿಸಿ]
ಜಗದೊಳ್ ಕುಶಾಸ್ತ್ರ ನಿಕರಕ್ಕೆ(ಪ್ರಕರಕೆ)* ಮೈಗೊಟ್ಟವಂ | ಮಿಗೆ ಪತಿತನಾಗದಿರ್ದಪನೆ ಪೇಳೆಂಬಿನಂ | ವಿಗತ ಚೇತನನಾಗಿ ಭರತಂ ಮಹೀತಳಕ್ಕೆ ಬಿದ್ದು ಮೂರ್ಛೆಯೊಳಿರಲ್ಕೆ ||
|
[ಆವರಣದಲ್ಲಿ ಅರ್ಥ];=
|
ಪದ್ಯ :೨೨:[ಸಂಪಾದಿಸಿ]
ಕಡೆಯ ಮಾತೇನಖಿಳ ಸೇನೆಯಂ ಭರತನಂ | ಕೆಡಹಿ ಕುಶನಲ್ಲಿಂದೆ ತುರಗಮಿರ್ದೆಡೆಗೆ ಬಂ | ದೊಡಹುಟ್ಟಿದಂ ವೆರಸಿ ನಿಲ್ವಿನಂ ದೂತರೀತೆರನಂ ರಘೂದ್ವಹಂಗೆ ||
|
[ಆವರಣದಲ್ಲಿ ಅರ್ಥ];=
|
ಪದ್ಯ :೨೩:[ಸಂಪಾದಿಸಿ]
ಬಂದಂ ರಥಾರೂಢನಾಗಿ ರಣರಂಗದೊಳ್ | ನಿಂದು ಮೈಮರೆದೊರಗಿದನುಜರಂ ಮಡಿದ ಬಲ | ವೃಂದಮಂ ಕುದುರೆಯಂ ಕಟ್ಟಿಕೊಂಡಿದಿರಾಗಿ ಬಿಲ್ವಿಡಿದು ಕಾಳೆಗಕ್ಕೆ ||
|
[ಆವರಣದಲ್ಲಿ ಅರ್ಥ];=
|
ಪದ್ಯ :೨೪:[ಸಂಪಾದಿಸಿ]
ಎಲೆ ಪಸುಳೆಗಳಿರ ನಿಮಗೀ ಧನುರ್ವೇದಮಂ | ಕಲಿಸಿದವನಾವನಾವುದು ನಿವಾಸಸ್ಥಳಂ | ಸಲಹಿದವನಾವನಾವಂ ತಂದೆ ತಾಯಾವಳಶ್ವಮಂ ಕಟ್ಟುವಿನಿತು || |
[ಆವರಣದಲ್ಲಿ ಅರ್ಥ];=
|
ಪದ್ಯ :೨೫:[ಸಂಪಾದಿಸಿ]
ರಾಜೇಂದ್ರ ನೀನೆಮ್ಮೊಳಾಹವಕೆ ಬಿಲ್ಗೊಂಡು | ವಾಜಿಯಂ ಬಿಡಿಸಿಕೊಳ್ಳಲ್ಲದೊಡೆ ಮರುಳಪ್ರ | ಯೋಜಕದ ಮಾತಿದೇತಕೆ ನಿರುಪಮ ಕ್ಷಾತ್ರಪೌರುಷವನುಳಿದು ಬರಿದೆ | |
[ಆವರಣದಲ್ಲಿ ಅರ್ಥ];=
|
ಪದ್ಯ :೨೬:[ಸಂಪಾದಿಸಿ]
ಶಿಶುಗಳಾಗಿಹ ನಿಮ್ಮೊಳೆನಗೆ ಕಾಳಗವೆ ಪರ | ವಶರಾಗಿ ಬಿದ್ದನುಜರಂ ಕಂಡು ಖತಿಯೊಳಾಂ | ವಿಶಿಖಮಂ ತೊಡುವೆನೆಂದೊಡೆ ಮನವೊಡಂಬಡದು ನಿಮ್ಮ ಜನನಸ್ಥಿಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :೨೭:[ಸಂಪಾದಿಸಿ]
ಈ ತಪೋವನದೊಳೆಮ್ಮಿರ್ವರನವಳಿಯಾಗಿ | ಸೀತೆಯೊರ್ವಳೆ ಪಡೆದಳನುದಿನದೊಳಾರೈದು | ಜಾತೋಪನಯನಾದಿ ಕರ್ಮಂಗಳಂ ಮಾಡಿ ನಿಗಮಾಗಮ ಸ್ಮೃತಿಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :೨೮:[ಸಂಪಾದಿಸಿ]
ರಾಮಚಾರಿತ್ರ ಪಠನಾಭ್ಯಾಸ ಯೋಗದಿಂ | ಕ್ಷೇಮಂ ಸುಪುಷ್ಟಿ ನಿಶ್ಚಲಮತಿ ನಿರಾಲಸ್ಯ | ಮೀಮಹಾಸೈನ್ಯವಂ ಗೆಲ್ವದಟು ತಮಗಾದುದೆಂದು ಕುಶನುಸಿರೆ ಕೇಳ್ದು || |
[ಆವರಣದಲ್ಲಿ ಅರ್ಥ];=
|
ಪದ್ಯ :೨೯:[ಸಂಪಾದಿಸಿ]
ಕಪಿರಾಜ ಕೇಳೈ ಕುಮಾರಕರ ನುಡಿಗಳಂ | ನಿಪುಣರಿವರಾವ ಪುರುಷಂಗೆ ಸಂಭವಿಸಿದರ್ | ವಿಪಿನಚಾರಿಗಳ ನಿನ್ನೊಮ್ಮೆ ನೀಂ ಬೆಸಗೊಳೆನೆ ನಸುನಗುತೆ ಸುಗ್ರೀವನು || |
[ಆವರಣದಲ್ಲಿ ಅರ್ಥ];=
|
ಪದ್ಯ :೩೦:[ಸಂಪಾದಿಸಿ]
ಸುಗ್ರೀವ ರಾಘವರ್ ಮಾತಾಡುವನಿತರೊಳ್ | ನಿಗ್ರಹಿಸಿಕೊಂಡಿರ್ದ ಕುದುರೆಯಂ ಬಿಡುವೊಡ | ಭ್ಯಗ್ರಮುಳ್ಳವನಾಗಿ ನೀಲನೈತರೆ ಕುಶಂ ಕೋಪದಿಂದಾ ಕಪಿಗಳ ||
|
[ಆವರಣದಲ್ಲಿ ಅರ್ಥ];=
|
ಪದ್ಯ :೩೧:[ಸಂಪಾದಿಸಿ]
ನೀಲ ವಾನರಸೈನ್ಯದೊತ್ತಾಯಮಂ ಕಂಡು | ಮೇಲೆಸೆವ ರವಿಯನಾರಾಧಿಸಿ ಕುಶಂ ಮಹಾ | ಸ್ಥೂಲಕಾಯದ ಕಪಿಗಳಂ ಗೆಲಲ್ಕೊಂದುವರೆ ಯೋಜನದಳತೆಯಗಲದ || |
[ಆವರಣದಲ್ಲಿ ಅರ್ಥ];=
|
ಪದ್ಯ :೩೨:[ಸಂಪಾದಿಸಿ]
ಆ ಮಹಾಬಾಣಂಗಳಂ ಪೂಡಿ ತೆಗೆದೆಚ್ಚು | ಭೀಮ ವಿಕ್ರಮ ಕುಶಂ ಕೆಡಹಿದನಸಿತ ಕಪಿ | ಸ್ತೋಮಮಂ ಬಳಿಕುರುಳ್ಚಿದನಾದಿ ನೀಲನಂ ಸುಗ್ರೀವ ಮುಖ್ಯರಾದ || |
[ಆವರಣದಲ್ಲಿ ಅರ್ಥ];=
|
ಪದ್ಯ :೩೩:[ಸಂಪಾದಿಸಿ]
ನರ ವಾಜಿ ದಂತಿ ಮುಸು ಕರಡಿ ಸಿಂಗಳಿಕ ವಾ | ನರ ದಾನವರೊಳಿಡಿದ ಸೇನೆಯೊಳ್ ನೋಡಲೊ | ರ್ವರುಮಿಲ್ಲದೆಲ್ಲರುಂ ಬಿದ್ದು ತಾನೇಕಾಕಿಯಪ್ಪುದುಂ ಖಾತಿಗೊಂಡು || |
[ಆವರಣದಲ್ಲಿ ಅರ್ಥ];=
|
ಪದ್ಯ :೩೪:[ಸಂಪಾದಿಸಿ]
ಬಚ್ಚೆವೋಗದ ರಾಮಬಾಣಂಗಳಂ ನಡುವೆ | ನುಚ್ಚುನೂರಾಗೆ ಕತ್ತರಿಸಿ ರಘುನಾಥನಂ | ಮುಚ್ಚಿದರ್ ಕಣೆಗಳಿಂ ಮತ್ತೆ ಕಾಕುತ್ಥ್ಸಂ ಕೆರಳ್ದು ಕುಶ ಲವರ ಮೇಲೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೩೫:[ಸಂಪಾದಿಸಿ]
ಕಕ್ಕಸದೊಳಂದು ರಾವಣ ಕುಂಭಕರ್ಣಾದಿ | ರಕ್ಕಸರ ತಲೆಗಳನರಿದು ತಿರುಗಿಬಹ ಕಣೆಗ | ಳಿಕ್ಕಡಿಗಳಾಗಿ ಬಿದ್ದುವು ಧರೆಗೆ ಕೂಡೆ ಬಾಲಕರಿಸುಗೆ ತನ್ನಿಸುಗೆಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೩೬:[ಸಂಪಾದಿಸಿ]
ಪಲ್ಲವಿತ ನವ ಚೂತತರು ಬೇಸಗೆಯ ಝಳಕೆ | ನಿಲ್ಲದಸವಳಿದು ಜೋಲ್ವಂತೆ ಕೋಮಲಕಾಯ | ದೆಲ್ಲೆಡೆಯೊಳಂ ನಾಂಟಿದಂಬುಗಳ ರುಧಿರ ಪ್ರವಾಹದಿಂದುರೆ ಬಳಲ್ದು || |
[ಆವರಣದಲ್ಲಿ ಅರ್ಥ];=
|
ಪದ್ಯ :೩೭:[ಸಂಪಾದಿಸಿ]
ಆ ಕುಮಾರರ್ ಬಳಿಕ ಶರಹತಿಗೆ ಮೈಮರೆದ | ಕಾಕುತ್ಥ್ಸನಲ್ಲಿಗೈತಂದು ರಾಜೇಂದ್ರನ ಶು | ಭಾಕಾರಮಂ ನೋಡಿ ಸಿರಿಮೊಗದ ಮಣಿ ಕುಡಲಂಗಳಂ ಕಂಬುಗಳದ || |
[ಆವರಣದಲ್ಲಿ ಅರ್ಥ];=
|
ಪದ್ಯ :೩೮:[ಸಂಪಾದಿಸಿ]
ಅಗ್ರಭವ ಕೇಳಿವರೊಳೊಂದು ರಥಮಂ ಪತ್ತಿ | ವಿಗ್ರಹದೊಳೆಚ್ಚರಾಗಿರ್ದ ವೀರರ್ಕಳ ಕ | ಚ ಗ್ರಹಣಮಂ ಮಾಡಿಕೊಂಡು ಬಹೆನೆನುತೆ ಲಕ್ಷ್ಮಣನ ಪೊಂದೇರ್ಗಡರ್ದು || |
[ಆವರಣದಲ್ಲಿ ಅರ್ಥ];=
|
ಪದ್ಯ :೩೯:[ಸಂಪಾದಿಸಿ]
ಕಂಡಿರೇ ಜಾಂಬವರೆ ರಾಮಾದಿ ವೀರರಂ | ದಿಂಡುಗೆಡಹಿದಬಳಿಕ ರಣದೊಳುಸಿರಿರ್ದರಂ | ಮಂಡೆವಿಡಿದೆಳೆದುಯ್ವೆನೆಂದು ಸೀತಾಸುತಂ ಬಂದಪಂ ನಾವಿವನೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :೪೧:[ಸಂಪಾದಿಸಿ]
ಕೆಡದಿರ್ದರೆಲ್ಲರಂ ನೋಡಿ ರಣರಂಗದೊಳ್ | ಮಿಡುಕಿ ಮಾತಾಡುವಿವರಂ ಕಂಡು ಲೀಲೆಯಿಂ | ಪಿಡಿದು ಲವನೆಳೆತಂದುಕೌತುಕದ ಕಪಿಗಳೆಂದಣ್ಣಂಗೆ ತೋರಿಸಲ್ಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೧:[ಸಂಪಾದಿಸಿ]
ಏನಾದರೋ ತನಯರೆಂದು ಚಿಂತಿಸುತಿರ್ಪ | ಜಾನಕಿಗೆ ರಾಮಾದಿಗಳ ಭೂಷಣಂಗಳ | ಕಾನನದ ಬೇಂಟೆಯೊಳ್ ಸಿಕ್ಕಿ ಸೀಕರಿಗೊಂಬ ಮೃಗಪೋತಕಂಗಳಂತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೧:[ಸಂಪಾದಿಸಿ]
ಆರುಮರಿಯದವೊಲೀ ಕಾನನದೊಳಿರ್ದೆನಾಂ | ಧಾರಿಣೀಶರ ಭೂಷಣಂಗಳೇತಕೆ ನಮಗೆ | ವೀರ ಕಪಿವರರಿವರ್ ಜಗದೊಳಭಿಮಾನಿಗಳ್ ಭಂಗಮೇಕಿಂತಿವರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೩:[ಸಂಪಾದಿಸಿ]
ವೈದೇಹಿ ನುಡಿದುದುಂ ಕೈಕೊಂಡು ಲವನವರ | ನುಯ್ದು ರಣರಂಗದೊಳ್ ಮಗುಳಿರಿಸಿ ಬಂದ ನಿರ | ದೈದೆ ನಾರದನಿಂದ ಕೇಳ್ದು ವಾಲ್ಮೀಕಿ ಮುನಿ ಪಾತಾಳಲೋಕದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೪:[ಸಂಪಾದಿಸಿ]
ಶರ ವೇದಮೂರ್ತಿಗಳ ತೆರದಿಂದ ರಾಜಿಸುವ | ತರಳರಂ ಮಣಿದೆತ್ತಿ ಮಕ್ಕಳಿರ ನಿಮಗೆ ರಘು | ವರನ ಸೇನೆಯೊಳಾಯ್ತುಗಡ ಕಲಹಮೇಕೆ ತೊಡಗಿತು ತೋಟಿ ನಿಮ್ಮಕೂಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೫:[ಸಂಪಾದಿಸಿ]
ತಂದೆ ನೀವಿರಲೆಮಗೆ ಸುಕ್ಷೇಮಕರಮಪ್ಪು | ದೆಂದೆಂದುಮಿದು ನಿಜಂ ನಿಮ್ಮಡಿಗಳುಪದೇಶ | ದಿಂದರಿಗಳಂ ಗೆಲ್ದೆವೀನಿಮ್ಮ ಪುಣ್ಯಾಶ್ರಮದೊಳಾಯ್ತು ಭೂತ ಹಿಂಸೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೬:[ಸಂಪಾದಿಸಿ]
ಕಡೆಯ ಮಾತೇನಿನ್ನು ದೊರೆದೊರೆಗಳೆಲ್ಲರಂ | ಪಡೆಯೊಳ್ ನಿಶಾಟ ಕಪಿ ನರ ಚಾತುರಂಗಮಂ | ಕೆಡಹಿದೆವೆನಲ್ ಕುಶನ ನುಡಿಗೆ ಸೈವೆರೆಗಾಗಿ ವಾಲ್ಮೀಕಿಮುನಿ ಮನದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :೪೭:[ಸಂಪಾದಿಸಿ]
ಶರಧಿಯಂ ಕಟ್ಟುವಂದಾರಾಘವೇಶ್ವರಂ | ಧರೆಯೊಳಿಟ್ಟಣಿಸಿರ್ದ ಬೆಟ್ಟಂಗಳೆಲ್ಲಮಂ | ತರಿಸಿದಂ ಭೂಮಿಗಾಧಾರಮಿಲ್ಲದೆ ಪೋಪುದೆಂದವನ ತನುಜಾತರು || |
[ಆವರಣದಲ್ಲಿ ಅರ್ಥ];=
|
ಪದ್ಯ :೪೮:[ಸಂಪಾದಿಸಿ]
ತಟ್ಟುಗೆಡದಿಹ ವಾಜಿ ವಾರಣ ವರೂಥದಿಂ | ದಿಟ್ಟಣಿಸಿ ಬಿದ್ದ ರಾಕ್ಷಸ ಮನುಜ ಕಪಿಗಳಿಂ | ದಟ್ಟಿನಗಲಕೆ ಚೆಲ್ಲಿದ ಛತ್ರ ಚಾಮರ ಪತಾಕೆಗಳ ಮೆದೆಗಳಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೪೯:[ಸಂಪಾದಿಸಿ]
ಅಂದು ಪುರಹೂತವೈರಿಯ ಸರ್ಪಶರದಿಂದೆ | ಪೊಂದಿದ ಸಮಸ್ತ ಬಲ ಸಹಿತ ಬಿದ್ದೆಚ್ಚರಳಿ | ದಂದದಿಂ ನಸು ಮಸುಳ್ದಾನನದ ನಿಶೆಯ ತಾವರೆವೊಲಾಗಿಹ ಕಣ್ಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೦:[ಸಂಪಾದಿಸಿ]
ಈಕ್ಷಿಸಿ ಕಮಂಡಲೋದಕದಿಂದೆ ಮುನಿವರಂ | ಪ್ರೋಕ್ಷಿಸಿದೊಡುರಗ ತಲ್ಪದೊಳುಪ್ಪಡಿಸುವ | ಬ್ಜಾ ಕ್ಷನೀತಂ ತಪ್ಪದೆಂಬಂತೆ ಕಣ್ದೆರದು ವಾಲ್ಮೀಕಿಗಭಿನಮಿಸಲು || |
[ಆವರಣದಲ್ಲಿ ಅರ್ಥ];=
|
ಪದ್ಯ :೫೧:[ಸಂಪಾದಿಸಿ]
ಬಳಿಕ ರಾಘವನ ಸಿರಿಮುಡಿಗೆ ನಭದಿಂದೆ ಪೂ | ಮಳೆ ಕರೆದುದುತ್ಸವದೊಳಮರ ದುಂದುಭಿಗಳುರೆ | ಮೊಳಗಿದವು ಋಷಿಮಂತ್ರಪೂತ ಜಲದಿಂದ ಭರತಾದಿಗಳ್ ಜೀವಿಸಿದರು || |
[ಆವರಣದಲ್ಲಿ ಅರ್ಥ];=
|
ಪದ್ಯ :೫೨:[ಸಂಪಾದಿಸಿ]
ಬರಿಸಿದಂ ನೆನೆದು ಸುರಧೇನುವಂ ವಾಲ್ಮೀಕಿ | ಪರಮ ಸಂಪ್ರೀತಿಯಿಂ ಬೇಡಿದ ಪದಾರ್ಥಮಂ | ತರಿಸಿದಂ ದುಗ್ಧಾಭಿಷೇಕಮಂ ಮಾಡಿಸಿದನಾ ರಾಘವೇಶ್ವರಂಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೩:[ಸಂಪಾದಿಸಿ]
ರಾಜೇಂದ್ರ ಕೋಪಮಂ ಮಾಡದಿರ್ ನಿನ್ನಂ ಕೃ | ಪಾಜಲಧಿಯೆಂದು ಮರೆವೊಕ್ಕರಂ ಕಾವನೆಂ | ದೀಜಗಂ ಬಣ್ಣಿಪುದು ನಿನ್ನ ತನುಸಂಭವರ್ ಜಾನಕಿಯ ಮಕ್ಕಳಿವರು || |
[ಆವರಣದಲ್ಲಿ ಅರ್ಥ];=
|
ಪದ್ಯ :೫೪:[ಸಂಪಾದಿಸಿ]
ಜಾತಂ ವಿನೀತನಾಗಲಿ ಧೂರ್ತನಾಗಿರಲಿ | ತಾತಂಗೆ ವಿರಹಿತವೆ ನೋಡದಿರ್ ಬಾಲಕರ | ತೀತಮಂ ಕ್ಷಮಿಸೆಂದು ವಾಲ್ಮೀಕಿ ನುಡಿಯೆ ರಾಘವ ನೂರ್ಮಿಳಾಪತಿಯನು || |
[ಆವರಣದಲ್ಲಿ ಅರ್ಥ];=
|
ಪದ್ಯ :೫೫:[ಸಂಪಾದಿಸಿ]
ಇಂತೆಂದು ಲಕ್ಷ್ಮಣಂ ನುಡಿಯೆ ವಾಲ್ಮೀಕಿ ಸಮ | ನಂತರದೊಳೇಕಾಕಿಯಾಗಿ ಜಾನಕಿ ವಿರಹ | ಸಂತಾಪದಿಂದಡವಿಯೊಳ್ ತೊಳಲುತಿರ್ದುದಂ ಕಂಡು ತನ್ನಾಶ್ರಮಕ್ಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೬:[ಸಂಪಾದಿಸಿ]
ಬಳಿಕ ವಾಲ್ಮೀಕಿ ನಿಜಶಿಷ್ಯರಂ ಸದನಕ್ಕೆ | ಕಳುಹಿ ತರಿಸಿದನಮಲ ವಲ್ಲಕಿಗಳಂ ತನ್ನ | ಬಳಿಯೊಳಭ್ಯಾಸಮಂ ಮಾಡಿಸಿದ ರಾಮಚಾರಿತ್ರಮಂ ತುದಿಮೊದಲ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೭:[ಸಂಪಾದಿಸಿ]
ವೀಣೆಯಂ ಕೈಗಿತ್ತು ಬಾಲಕರ ವದನದೊಳ್ | ವಾಣಿ ತಾಂ ನೆಲಸಿದಳೊ ಗಾನದೇವತೆಯ ಮೈ | ಗಾಣಿಕೆಯೊ ಮೋಹನದ ತನಿರಸವೊ ಸೊಗಯಿಸುವ ಕರ್ಣಾಮೃತವೋ ಪೇಳೆನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೮:[ಸಂಪಾದಿಸಿ]
ಸ್ಥಾಯಿ ಸಂಚಾರಿಗಳ ಸರಿಗಮ ಪಧನಿಯ ಸರ | ದಾಯತದ ಶುದ್ಧ ಸಂಕೀರ್ಣ ಸಾಳಗದ ಪೂ | ರಾಯತ ಸುತಾನಂಗಳಂ ತಾರ ಮಧ್ಯ ಮಂದ್ರಗಳಿಂದೆ ಸೊಗಸುಗೊಳಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :೫೯:[ಸಂಪಾದಿಸಿ]
ಭಾವಿಸೆಲೆ ಸೌಮಿತ್ರಿ ಬಾಲಕರ್ ಸುಲಲಿತ ವ | ಜೋ ವಿಲಾಸಂಗಳಿಂ ಸ್ವರದಿಂದೆ ರೂಪಿಂದೆ | ಲಾವಣ್ಯದಿಂದೆ ಗತಿಯಿಂದೆ ಚೇಷ್ಟೆಗಳಿಂದೆ ಸೀತೆಯಂ ನೆನೆಯಿಸುವರು || |
[ಆವರಣದಲ್ಲಿ ಅರ್ಥ];=
|
ಪದ್ಯ :೬೦:[ಸಂಪಾದಿಸಿ]
ರಾಯನಾಡಿದ ನುಡಿಗೆ ನಸುನಗುತೆ ಲಕ್ಷ್ಮಣಂ | ಜೀಯ ನಿನ್ನಂಬುಗಳ್ ಮೋಘಮಾದಪುವೆ ಪರ | ಸಾಯಕದೊಳೀತಗಳ್ ನಿನ್ನಸುತರದರಿಂದೆ ನೆಲೆಗೊಂಡುದಾತ್ಮ ಶಕ್ತಿ || |
[ಆವರಣದಲ್ಲಿ ಅರ್ಥ];=
|
ಪದ್ಯ :೬೧:[ಸಂಪಾದಿಸಿ]
ಆರ ತನುಜಾತರೆಲೆ ಮಕ್ಕಳಿರ ನಿಮಗಿನಿತು | ವೀರತ್ವಮೆತ್ತಣದು ಪೇಳ್ವುದೆಂದಾತ್ಮಜರ | ನಾರಾಘವಂ ಕೇಳ್ದೊಡವರಾವು ಜಾನಕಿಯ ಗರ್ಭಸಂಭವರೆಮ್ಮನು || |
[ಆವರಣದಲ್ಲಿ ಅರ್ಥ];=
|
ಪದ್ಯ :೬೨:[ಸಂಪಾದಿಸಿ]
ತನಯರಂ ತೆಗೆದೊಡನೆ ಮುಂಡಾಡಿ ಬಿಗಿಯಪ್ಪಿ | ಘನತರಸ್ನೇಹದಿಂ ಶಿರವನಾಘ್ರಾಣಿಸಿ ವ | ದನವ ನೊಡನೊಡನೆ ಚುಂಬಿಸಿ ಮತ್ತೆ ಮತ್ತೆ ವಾಲ್ಮೀಕಿಯಂ ಮಿಗೆ ಪೊಗಳುತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೬೩:[ಸಂಪಾದಿಸಿ]
ಬಳಿಕ ವಾಲ್ಮೀಕಿಯಂ ಸತ್ಕಸಿರಿ ಸೀತೆ ಭೂ | ತಳವರಿಯೆ ಪರಿಶುದ್ಧೆ ಲೋಕಾಪವಾದಕ್ಕೆ | ಕಳೆದೆನೆಂತಾದೊಡಂ ಪುತ್ರರಂ ಪಡೆದಳಿನ್ನರವರಿಸದೆನ್ನ ಬಳಿಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :೬೪:[ಸಂಪಾದಿಸಿ]
ಇತ್ತ ನಿಜತನುಜರಂ ಕಳುಹಿ ವಾಲ್ಮೀಕಿಮುನಿ | ಪೋತ್ತಮಂ ಬರಲಾಶ್ರಮ ದ್ವಾರದೊಳ್ ಕಂಡು | ಚಿತ್ತದೊಳ್ ಮರುಗುತೇನಾದರೆಲೆ ತಾತ ಕುಶ ಲವರೊಡಲ್ವಿಡಿವೆನೆಂತೊ || |
[ಆವರಣದಲ್ಲಿ ಅರ್ಥ];=
|
ಪದ್ಯ :೬೫:[ಸಂಪಾದಿಸಿ]
ಮಣಿದೆತ್ತಿ ಸೀತೆಯಂ ಸಂತೈಸಿ ಮಗಳೆ ನಿ | ನ್ನಣುಗರಂ ತಮ್ಮ ತಾತಂ ಕೂಡಿ ಕೊಂಡೊಯ್ದ | ನೆಣಿಕೆ ಬೇಡಿದಕಿನ್ನು ನಿನ್ನುಮಂ ಕಾಂತನಲ್ಲಿಗೆ ಕಳುಹಿ ಬರ್ಪೆನೆಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :೬೬:[ಸಂಪಾದಿಸಿ]
ಮೇಲೆ ಜಾನಕಿ ಸಹಿತ ರಾಘವಂ ಸಾಮ್ರಾಜ್ಯ | ಲೋಲನಾಗಿರ್ದನೆಲೆ ಜನಮೇಜಯಾವನೀ | ಪಾಲ ಕೇಳ್ದೈ ಕುಶಲವರೊಡನಾ ರಾಮಂಗೆ ಬಂದ ಕದನದ ಕಥೆಯನು || |
[ಆವರಣದಲ್ಲಿ ಅರ್ಥ];=
|
ಪದ್ಯ :೬೭:[ಸಂಪಾದಿಸಿ]
ಅರಸ ನೀಂ ಬೆಸಗೊಳಲ್ ಪೇಳ್ದೆನಾಂ ಕುಶ ರಾಘ | ವರ ಯುದ್ಧಮಂ ಸುರಪ ಫಲುಗುಣನ ಕಾಳಗವ | ನೊರೆಯಲೇಕಿನ್ನು ಕೇಳ್ದರಿವಲೈ ಬಭ್ರುವಾಹನ ಪಾರ್ಥರಾಹವವನು || |
[ಆವರಣದಲ್ಲಿ ಅರ್ಥ];=
|
ಹೋಗಿ[ಸಂಪಾದಿಸಿ]
ನೋಡಿ[ಸಂಪಾದಿಸಿ]
ಜೈಮಿನಿ ಭಾರತ-ಸಂಧಿಗಳು:*1 * 2 *3 * 4 * 5 *6 * 7 * 8 *9 * 10 * 11* 12* 13 * 14 * 15 * 16 *17* 18 * 19* 20 * 21 * 22* 23* 24 * 25* 26* 27* 28* 29* 30* 31* 32* 33* 34 |
ಪರಿವಿಡಿ[ಸಂಪಾದಿಸಿ]
ಕನ್ನಡ ವಿಕಿಸೋರ್ಸ್[ಸಂಪಾದಿಸಿ]
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ[ಸಂಪಾದಿಸಿ]
- ↑ ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
- ↑ ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.