ನುಡಿಯಲ್ಲಿ ಕಡೆತನಕ ಕರ್ಕಶವಿಲ್ಲದೆ

ವಿಕಿಸೋರ್ಸ್ದಿಂದ



Pages   (key to Page Status)   


ನುಡಿಯಲ್ಲಿ ಕರ್ಕಶವಿಲ್ಲದೆ ನಡೆಯಲ್ಲಿ ಬೀಸರವಾಗದೆ
ಹಿಡಿದ ಭಕ್ತಿಯ ಕಡೆತನಕ ಬಿಡದೆ
ಬಡತನ ಎಡರು ಕಂಟಕ ಬಂದಲ್ಲಿ ಚಿಂತೆಯಿಂದ ಕಾಂತಿಗುಂದದೆ ಅಡಿಗಡಿಗೆ ಶಿವನೆಂಬ ನುಡಿಯ ಮರೆಯದೆ ಇರ್ಪ ಸದ್ಭಕ್ತಂಗೆ ಬೇಡಿದ ಪದವ ಕೊಡುವ ನಮ್ಮ ಅಖಂಡೇಶ್ವರ.