ಹೊಟ್ಟು ಜಾಲಿಯ ತುತ್ತತುದಿಯ

ವಿಕಿಸೋರ್ಸ್ದಿಂದ



Pages   (key to Page Status)   


ಹೊಟ್ಟು ಜಾಲಿಯ ತುತ್ತತುದಿಯ ಮೇಲೊಂದು ಚೌಷಷ್ಟಿ ವಿದ್ಯಾಕಳಾಪ್ರವೀಣವೆಂಬ ಪಟ್ಟಣ. ಆ ಪಟ್ಟಣದೊಳಗೊಬ್ಬ ತಳವಾರ_ ಹುಟ್ಟು ಬಂಜೆಯ ಮಗ ಮರೆದೊರಗಲು
ಐದು ಆನೆಯ ಕಳ್ಳರೊಯ್ದರು
ಐದು ಒಂಟೆ ಹುಯ್ಯಲು ಹೋದವು_ ಅರೆಮರುಳಂಗೆ ನೆರೆಮರುಳ ಬುದ್ಧಿಯ ಹೇಳುತ್ತಿರ್ಪುದ ಕಂಡೆ. ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ ಹಾಲುಕ್ಕಿ ಮಿಕ್ಕ ಹಾಲ ಬೆಕ್ಕು ಕುಡಿಯಿತ್ತು
ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ.