ಅನುಭವ ಪ್ರಾಣಲಿಂಗ ಪರಾತ್ಪರವೆಂದರಿದು,

ವಿಕಿಸೋರ್ಸ್ದಿಂದ



Pages   (key to Page Status)   


ಅನುಭವ ಪ್ರಾಣಲಿಂಗ ಪರಾತ್ಪರವೆಂದರಿದು
``ಅಣೋರಣೀಯಾನ್ ಮಹತೋ ಮಹೀಯಾನ್ ಎಂದು ಅಣುರೇಣು ತೃಣಕಾಷ*ದೊಳ್ಕೂಡಿ
``ತೇನ ವಿನಾ ತೃಣಾಗ್ರಮಪಿ ನ ಚಲತಿ
_ ಎಂದು ಪರಿಪೂರ್ಣ ಸದಾಶಿವನೆಂದರಿದು_ ಇಂತು ಕ್ಷಣವೇದಿ ಅಂತರಂಗವ ವೇದಿಸಲ್ಕೆ
ಅಗಣಿತ ಅಕ್ಷೇಶ್ವರ ತಾನೆಂದು ಪ್ರಣಮಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ ಗುಹೇಶ್ವರಾ ನಿಮ್ಮ ಶರಣನುಪಾಮಾತೀತನು.