ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು

ವಿಕಿಸೋರ್ಸ್ದಿಂದ


Pages   (key to Page Status)   

ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು ಕತ್ತಲೆಯನರಸುವೆ ! ಇದೇಕೊ ಮರುಳುಮಾನವಾ ಜಾತಿಯಲ್ಲಿ ಅಧಿಕನೆಂಬೆ ! ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ `ಭಕ್ತನೆ ಶಿಖಾಮಣ' ಎಂದುದು ವಚನ. ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು
ಕೆಡಬೇಡ ಮಾನವಾ.