ಪುಟ:ಯಶೋಧರ ಚರಿತೆ.pdf/೧೩೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೨೬

ಯಶೋಧರ ಚರಿತೆ

೨+೩+೩+೨=೧೦; ೩+೨x೨=೧೦ ಮಾತ್ರೆಗಳು) ಠಾಯ ಎಂದರೆ ಪ್ರಬಂಧ
ವಿಶೇಷ. ಚಾಳೆಯ ಎಂದರೆ ಒಂದ ಬಗೆಯ ಕುಣಿತದ ಗತಿ.
ಮಾಳವ (ಶ್ರೀ)ಸಿರಿ ಎಂಬುದು ದೇಶೀರಾಗ; ಖರಹರಪ್ರಿಯ ಜನ್ಯವೆಂದು
ಮಾರ್ಗಸಂಗೀತದಲ್ಲಿ ನಿರ್ದೇಶಿತವಾಗಿದೆ. ಲಾಲಿತ್ಯ ಪೂರ್ಣವಾದ ಹಾಸ್ಯ ಶೃಂಗಾರ
ಮುಂತಾದ ಭಾವಗಳನ್ನು ಪ್ರಕಟಿಸುವುದರಿಂದ ಇದಕ್ಕೆ 'ರಕ್ತಿರಾಗ” ಎಂದು
ಹೆಸರು.
ಗ್ರಹ (ಗ್ರಾಹ) ಎಂದರೆ ತಾಳದಲ್ಲಿ ಗೀತ (ಪ್ರಬಂಧ) ಆರಂಭವಾಗುವ
ವಿವಿಧ ರೀತಿಗಳು.
೩೬. ತಾಳಕಾಯ ಎಂಬುದಕ್ಕೆ 'ತಾಳೆಯ ಮರದ ಕಾಯಿಯ' ಎಂದು
ಅರ್ಥ ಮಾಡಿದರೆ ಮೋಳಿಗೆ ಎಂಬುದಕ್ಕೆ 'ಖಾಯಿಗಳುಳ್ಳ ಗೊನೆ' ಎಂದು
ಅರ್ಥ ಹೇಳಬಹುದು. ಆಗ ತಾಳೆಯ ಕಾಯಿಯ ಗೊನೆಯಂತೆ ಅವನು
ಮುರುಡನಾಗಿದ್ದಾನೆ, ಎಂದು ಹೇಳಬೇಕು.
೩೭. ಕಣ್ಣಿಗೆ ಎದುರಾಗಿ ಮೊದಲಾಗಿ ಕಾಣಿಸಬಹುದಾದುದು ಮೂಗಿನ
ತುದಿ. ಅಲ್ಲಿಯೇ ಕಾಮಿನಿಯರು ಪರಪುರುಷರೊಡನೆ ಕಾಮಕೇಳಿಕೆಯನ್ನು
ಆಡುತ್ತಾರೆ. ಅಧಿಕಾರದ ಹಿರಿಮೆ, ರೂಪದ ಮೇಲ್ಮೆ, ಹಾಗೂ ಸೌಭಾಗ್ಯದ
ಮಹತ್ವಗಳು ಕಾಮಿನಿಯರನ್ನು ತಮ್ಮ ವಶದಲ್ಲಿಟ್ಟುಕೊಳ್ಳುವ ಸಾಧನಗಳೆಂದು
ದುರಹಂಕಾರ ಪಡುವವರೂ ಅವರಿಂದ ವಂಚಿತರಾಗುತ್ತಾರೆ ಎಂದು ತಾತ್ಪರ್ಯ.
೩೮. ಇಲ್ಲಿ ಬರುವ ಮಾತುಗಳನ್ನು ಯಶೋಧರನು ಆಡಿದನು ಎಂದು
ಹೇಳುವವರು ಇದ್ದಾರೆ. ಆದರೆ 'ಮಾರಿಗೇ ತೃಪ್ತಿ' ಎಂಬಂತಹ ಮಾತು ಅವನಿಂದ
ಬರುವುದಕ್ಕಿಂತ ಮಾರಿದೇವತೆಯ ಆರಾಧಕನಾದ ಮಾರಿದತ್ತನ ಬಾಯಿಂದ
ಬರುವುದು ಒಳ್ಳೆಯದೆಂದು ತೋರುತ್ತದೆ.
೩೯. ತುಂಬಿ ಎಂಬುದು ಕಾಮುಕತೆಗೆ ಸಂಕೇತವಾಗಿದೆ. ಅಮೃತಮತಿ
ಮಧುಕರಿಯಂತೆ ಕಾಮವೃತ್ತಿಯಲ್ಲಿದ್ದಾಗ, ಅವಳಿಗೆ ವಿರುದ್ಧವಾಗಿ ಕಾಣಿಸಿದವನು
ಯಶೋಧರ. ಅವನು ಸಂಪಗೆಯಂತೆ ಸುಂದರನಾಗಿದ್ದರೂ ಅವಳಿಗೆ
ವಿಷಪ್ರಾಯನಾದನು ಎಂಬುದು ಭಾವ.

೪೦. ಯಶೋಧರನು ಧರಿಸಿಕೊಂಡಿರುವ ಮುತ್ತಿನ ಹಾರ ಅವನ
ವಿಶಾಲವಾದ ತೆಗಲೆಯಲ್ಲಿ ಶೋಭಿಸುವುದೆಂದೂ, ಆ ಹಾರದಲ್ಲೇ ಲಕ್ಷ್ಮೀದೇವಿ
ಉಯ್ಯಾಲೆಯಾಡುವಳೆಂದೂ ಹಾಗೆ ಉಯ್ಯಾಲೆಯಾಡಲು ಅನುಕೂಲವಾದ
ವಸಂತವೇ ಆತನ ಉರಸ್ಥಳವೆಂದೂ ಇಲ್ಲಿ ಹೇಳಲಾಗಿದೆ. ಎಂದರೆ ಯಶೋಧರನ