ಪದ್ಮಾಸನದಲ್ಲಿ ಕುಳ್ಳಿರ್ದು, ಕುಂಡಲಿಯ

ವಿಕಿಸೋರ್ಸ್ದಿಂದ



Pages   (key to Page Status)   


ಪದ್ಮಾಸನದಲ್ಲಿ ಕುಳ್ಳಿರ್ದು
ಕುಂಡಲಿಯ ಸ್ಥಾನವನರಿದು
ಅಂಡಲೆವ ಅಧೋವಾಯುವ ಊಧ್ರ್ವಮುಖವ ಮಾಡಿ ಷಡಂಗುಲವನೊತ್ತಿ ಊಧ್ರ್ವವಾಯುವನಧೋಮುಖಕ್ಕೆ ತಂದು ಉತ್ತರಪೂರ್ವದಕ್ಷಿಣವನತಿಗಳೆದು ಪಶ್ಚಿಮದ ಸುಷುಮ್ನೆಯಲ್ಲಿ ಮನಶ್ಶಕ್ತಿಸಂಧಾನಸಂಯೋಗದಿಂದ ಸಹಸ್ರದಳಕಮಲದಲ್ಲಿ ನಾದಬ್ರಹ್ಮವನೆಯ್ದಿ
ಮಹಾವಾಸನಾಮೃತವ ದಣಿಯುಂಡು ತ್ರಿಸಂಧಾನ ಒಂದಾದ ಬಳಿಕ_ಆತ್ಮ ಪರಮಾತ್ಮ ಇಂತಾಗಿ
ಅಂತರಾತ್ಮ ವಿಚಾರಕ್ಕೆ ಇಳಿದಲ್ಲಿ ಅಭ್ಯಾಸಕ್ಕೆ ಬರಲಾಗದು. ಅದೆಂತೆಂದಡೆ:ದೇವಲೋಕಕ್ಕೆ ಸಂದು ಮರಳಿ ಮಾನವನಪ್ಪಡೆ ಅದೇ ಪಾತಕ ಹಸಿದವನಮೃತವನುಂಡು
ಮರಳಿ ಹಸಿದು
ಉಂಡಿಹೆನೆಂದಡೆ ಅದೇ ಪ್ರಕೃತಿ ಗುಣ. ಇದು ಕಾರಣ_ಪರಮಾತ್ಮ ತಾನಾದಾತನು
ಪರಮಾತ್ಮ ತಾನಾದನಾಗಿ ತನ್ನಲ್ಲಿ ತಾನೆ ಏಕೀ ಭವಿಸಿರಬೇಕು
ಗುಹೇಶ್ವರಾ.