Pages (key to Page Status)
ಮದ್ದ ನಂಬಿಕೊಂಡಡೆ ರೋಗ ಮಾಣದಿಪ್ಪುದೆ ? ಸಜ್ಜನಿಕೆಯುಳ್ಳಡೆ ಪ್ರಸಾದಕಾಯ ಕೆಡುವುದೆ ? ಪ್ರಾಣ ಲಿಂಗವಾದಡೆ ಪ್ರಾಣ ಬೇರಪ್ಪುದೆ ? ಪ್ರಾಣಲಿಂಗ ಪ್ರಸಾದವನು ತಿಳಿದು ನೀವು ನೋಡಿರೆ ನಾದ ಬಿಂದು ಸೂಸದ ಮುನ್ನ ಆದಿಯ ಪ್ರಸಾದವ ಭೇದಿಸಿಕೊಂಡರು_ ಗುಹೇಶ್ವರಾ ನಿಮ್ಮ ಶರಣರು.