ಜಗದ ಜನವ ಹಿಡಿದು

ವಿಕಿಸೋರ್ಸ್ದಿಂದ



Pages   (key to Page Status)   


ಜಗದ ಜನವ ಹಿಡಿದು ಉಪದೇಶವ ಮಾಡಿದ ಗುರುವಿಂಗೆ
ಆ ಉಪದೇಶ ಕೊಟ್ಟುಕೊಂಡ ಮಾರಿಗೆ ಹೋಹುದಲ್ಲದೆ ಅಲ್ಲಿ ನಿಜವಳವಡುವುದೆ ? ತೆರನನರಿಯದ ಸಂಸಾರ ಜೀವಿಗಳು ಮಾಡಿದ ದೋಷ ತಮ್ಮನುಂಗಿ
ಆ ಗುರುವಿಂಗೆ ಉಪಹತಿಯ ಮಾಡುವುದು ನೋಡಾ. ಗುಹೇಶ್ವರಾ_ತಾನಿಟ್ಟ ಬೇತಾಳ ತನ್ನನೆ ತಿಂದಡೆ ಬೇಕು ಬೇಡ ಎನಲುಂಟೆ ?