ಅಣುಕುಂಡಲ ನಾಗಬಂಧನವೆಂಬ ಸುಷುಮ್ನನಾಳದಿಂದ

ವಿಕಿಸೋರ್ಸ್ದಿಂದ



Pages   (key to Page Status)   


ಅಣುಕುಂಡಲ ನಾಗಬಂಧನವೆಂಬ ಸುಷುಮ್ನನಾಳದಿಂದ ಒದಗಿದ ನಿರೂಪ(ಬಿಂದು)ವನು ಒಸರಲೀಯದೆ ಕಟ್ಟಿಹೆನೆಂದರೆ ಆ ಶಶಿಧರಂಗಳವಲ್ಲ. ಒಡಲುಗೊಂಡರೆ ಒಸರುವುದು ಮಾಬುದೆ ? ಒಡಲಿಲ್ಲದಿದ್ದರೆ ಒಸರುವುದು ಮಾಬುದು. ಒಸರಲೀಯದೆ ಕಟ್ಟಿದೆನೆಂಬ ಮೂರ್ಖರೆಲ್ಲಾ ಭಂಗಬಟ್ಟು ನಸಿದ್ಧರಾಗಿ ಹೋದರಯ್ಯಾ. ಉಂಡು ಉಪವಾಸಿ ಬಳಸಿ ಬ್ರಹ್ಮಚಾರಿ
ಕೋಟ್ಯನುಕೋಟಿ ಕರ್ಮವ ಪೂಜಿಸುವ ಕರ್ಮಿಗಳೆತ್ತ ಬಲ್ಲರು
ಆ ಶರಣನ ? ಭಕ್ತಿ ಹಿಂದುಮುಂದಾದ ಮಹಾಲಿಂಗೈಕ್ಯನ ನಿಲವ ? ಇದು ಕಾರಣ
ಕೂಡಲಚೆನ್ನಸಂಗಯ್ಯಾ ಲಿಂಗೈಕ್ಯರ ನಿಲವ ಲಿಂಗೈಕ್ಯನೇ ಬಲ್ಲ.