ಆದಿ ಆಧಾರದಲ್ಲಿ ವೇಧಿಸಿದ

ವಿಕಿಸೋರ್ಸ್ದಿಂದ



Pages   (key to Page Status)   


ಆದಿ ಆಧಾರದಲ್ಲಿ ವೇಧಿಸಿದ ಚಿದ್ಭಸ್ಮವ ಭೇದಿಸಿ ಬಹಿಷ್ಕರಿಸಿ ಸರ್ವಾಂಗದಲ್ಲಿ ಧರಿಸಲು ಭವಬಂಧನ ದುರಿತದೋಷಂಗಳು ಪರಿಹರವಪ್ಪುದು ತಪ್ಪದು ನೋಡಾ. ಇದು ಕಾರಣ ಅಡಿಗಡಿಗೆ ಶ್ರೀ ವಿಭೂತಿಯನೆ ಧರಿಸಿ ಮಲತ್ರಯಂಗಳ ತೊಳೆದೆನು ನೋಡಾ. ಮಲತ್ರಂಯಗಳು ಪರಿಹರವಾಗದ ಮುನ್ನ ಭವಬಂಧನದ ಬೇರುಗಳ ಸಂಹರಿಸಿ ಜನನ ಮರಣಂಗಳ ಒತ್ತಿ ಒರಸುವುದು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.