ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ

ವಿಕಿಸೋರ್ಸ್ದಿಂದ



Pages   (key to Page Status)   


ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ ನಿಧಾನ ಭೂಗತವಾಗಿದ್ದಿತ್ತಯ್ಯಾ. ಶ್ರೀಗುರುವೆಂಬ ಅಂಜನಸಿದ್ಧನು ಬಂದು
ಎನ್ನ ಅದಕ್ಕೆ ಬಲೆಯನಿಕ್ಕಿ
ತನ್ನ ಕರುಣಾಮೃತವೆಂಬ ಮರುಜವಣಿಯ ಹಿಂಡಿ ಆ ನಿಧಾನವನೆನಗೆ ಕರತಳಾಮಳಕವ ಮಾಡಿಕೊಟ್ಟನಯ್ಯಾ. ಗುಹೇಶ್ವರಾ_ನಿಮ್ಮ ಶರಣ ಅನಿಮಿಷನೆಂಬ ಶ್ರೀಗುರು.