ಒಳಗೆ ಗಡಣದೊಳಗು. ತಿಳಿಯದೆ

ವಿಕಿಸೋರ್ಸ್ದಿಂದ



Pages   (key to Page Status)   


ಒಳಗೆ ತಿಳಿಯದೆ ಹೊರಗೆ ಮಾಡುವ ಮಾಟವೆಲ್ಲ ಅಜ್ಞಾನದ ಗಡಣದೊಳಗು. ಒಳಗೆ ಗುರುಲಿಂಗಜಂಗಮದ ಪಾದತೀರ್ಥಪ್ರಸಾದವ ಕೊಂಡೆವೆಂದು ಹೊರಗೆ ಮಾಡುವ ಭಕ್ತಿಯ ಬಿಟ್ಟರೆ ಮುಂದೆ ಒದಗುವ ಮುಕ್ತಿಯ ಕೇಡು. ಅದೆಂತೆಂದೊಡೆ : ಅಸಲು ಕಳೆದ ಬಳಿಕ ಲಾಭವುಂಟೇ ? ಇಲ್ಲ ಇಲ್ಲ
ಮಾಣು. ಒಳಗಣ ಕೂಟ
ಹೊರಗಣ ಮಾಟವನರಿಯದೆ ಕೆಟ್ಟರು ನೋಡಾ ಹಿರಿಯರೆಲ್ಲರು ಅಖಂಡೇಶ್ವರಾ.