ಗುರುವಿಂಗೆ ಮನವನರ್ಪಿಸಿದಲ್ಲದೆ ತನುವನರ್ಪಿಸಿದಲ್ಲದೆ

ವಿಕಿಸೋರ್ಸ್ದಿಂದ



Pages   (key to Page Status)   


ಗುರುವಿಂಗೆ ತನುವನರ್ಪಿಸಿದಲ್ಲದೆ ತನುವಿನ ವಾಸನೆ ಹರಿಯದು. ಲಿಂಗಕ್ಕೆ ಮನವನರ್ಪಿಸಿದಲ್ಲದೆ ಮನದ ವಾಸನೆ ಹರಿಯದು. ಜಂಗಮಕ್ಕೆ ಧನವನರ್ಪಿಸಿದಲ್ಲದೆ ಧನದ ವಾಸನೆ ಹರಿಯದು. ಇದು ಕಾರಣ ತ್ರಿವಿಧಕ್ಕೆ ತ್ರಿವಿಧವನರ್ಪಿಸಿ ತ್ರಿವಿಧ ವಾಸನೆಯ ಹರಿದು
ತ್ರಿವಿಧವು ಒಂದಾದ ಘನವನೊಡಗೂಡಬಲ್ಲಡೆ ಸದ್ಭಕ್ತನೆಂಬೆನಯ್ಯ ಅಖಂಡೇಶ್ವರಾ.