ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ

ವಿಕಿಸೋರ್ಸ್ದಿಂದ


Pages   (key to Page Status)   

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆಜ್ಞಾಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆಜ್ಞಾಚಕ್ರದತ್ತಣಿಂದೆ ಊರ್ಧ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.