ಡಂಬು ಮಚ್ಚರ್ಯಕ್ಕೆ ಇಂಬುಗೊಡದಿರಬಲ್ಲಡೆ

ವಿಕಿಸೋರ್ಸ್ದಿಂದ



Pages   (key to Page Status)   


ಡಂಬು ಮಚ್ಚರ್ಯಕ್ಕೆ ಇಂಬುಗೊಡದಿರಬಲ್ಲಡೆ ಶರಣ. ಶಂಭುಪದಪದ್ಮಭಕ್ತಿನಂಬುಗೆವಿಡಿದು ಅಗಲದಿರಬಲ್ಲಡೆ ಶರಣ. ಸೂಸಲೀಯದೆ ಮನವ ಈಶಪದದಲ್ಲಿ ಮೀಸಲಾಗಿರಿಸಿಕೊಂಡಿರಬಲ್ಲಡೆ ಆ ಶರಣನ ಜಗದೀಶನೆಂಬೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.