ಪುಟ:ಕರ್ನಾಟಕ ಗತವೈಭವ.djvu/೪೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೩ನೆಯ ಪ್ರಕರಣ - ಕರ್ನಾಟಕ-ವಿಸ್ತಾರ

೧೯


ರಾಷ್ಟ್ರದಲ್ಲಿಯ ಸುಮಾರು ಅರ್ಧಕ್ಕಿಂತ ಹೆಚ್ಚು ಊರ ಹೆಸರುಗಳು ಕನ್ನಡವಿರುತ್ತವೆಂದು ಮಹಾರಾಷ್ಟ್ರದ ಪ್ರಸಿದ್ದ ಇತಿಹಾಸ ಸಂಶೋಧಕರಾದ ಶ್ರೀ ರಾಜವಾಡೆಯವರು ಮೊನ್ನೆ ಮೊನ್ನೆ ಒಪ್ಪಿಕೊಂಡಿದ್ದಾರೆ. (೨) ಅಣ್ಣಂಭಟ್ಟ, ಕೃಷ್ಣಂಭಟ್ಟ, ಮುಂತಾದ ಹೆಸರುಗಳೊಳಗಿನ ಮಕಾರವು ಕನ್ನಡ ಪ್ರತ್ಯಯವಾಗಿದೆ. (೩) ಸಾತಾರಾ ಮುಂತಾದ ಸ್ಥಳಗಳಲ್ಲಿಯ ಜೈನರು ಬುನಾದಿಯಿಂದಲೂ ಕನ್ನಡ ಭಾಷೆಯನ್ನು ಆಡುತ್ತಾರೆ. (೪) ಕರ್ನಾಟಕದಲ್ಲಿಯ ಹಲವು ಮನೆತನಗಳ ಕುಲದೇವತೆಗಳು ಮಹಾ ರಾಷ್ಟ್ರದಲ್ಲಿವೆ. ಧೌಮನರಸಿಂಹ, ನೀರಾನರಸಿಂಹ, ಕೋಹಳೆನರಸಿಂಹ, ತುಳಜಾ ಭವಾನಿ ಇವೇ ಅವು. (೫) ಕರ್ನಾಟಕದಲ್ಲಿಯ ಗುಡಿಗಳೊಳಗಿನ ಆಚಾರ ಪದ್ಧತಿಗಳು ಮಹಾರಾಷ್ಟ್ರದಲ್ಲಿಯೂ ಕಂಡುಬರುತ್ತವೆ. ನಮ್ಮ ಮಿತ್ರರಾದ ಶ್ರೀ ರಾಜ ಪುರೋಹಿತರವರು ದೇವರಗುಡ್ಡದಲ್ಲಿಯ ಗುಡಿಗೂ, ಜೇಜೂರಿನಲ್ಲಿರುವ ಗುಡಿಗೂ ಇರುವ ಸಾಮ್ಯವನ್ನು ಸಿದ್ಧ ಪಡಿಸಿರುವರಷ್ಟೇ! ಅದರಂತೆಯೇ ಚಿಪಳೂಣದ ಹತ್ತಿರ ಇರುವ ಪರಶುರಾಮರೇಣುಕಾ ಗುಡಿಯು ಸವದತ್ತಿಯ ಯಲ್ಲಮ್ಮನ ಗುಡಿಗೆ ಸಾಮ್ಯವಾಗಿರುತ್ತದೆ. (೬) ಮುಂಬೈ ಸುತ್ತು ಮುತ್ತಿನ ದೇಶವನ್ನು ಆಳುತ್ತಿದ್ದ ಶಿಲಾಹಾರ ಅರಸರು ಕನ್ನಡಿಗರಾಗಿದ್ದರೆಂದು ಮುಂಬಯಿ ಗ್ಯಾಜಟಿಯರ (Bombay Gazeteer) ದಲ್ಲಿ ಉಲ್ಲೇಖವಿದೆ. (೭) ಕೊಲ್ಲಾಪುರದ ಅರಸುಮನೆತನದ ಲಗ್ನಗಳಲ್ಲಿ 'ಬಿಸಿಯೂಟ' ಎಂಬುವ ಪದ್ಧತಿಯು ಉಂಟಂತೆ. (೮) ಹಿಂದೂ ದೇಶದ ಬ್ರಾಹ್ಮಣರಲ್ಲಿ ಪಂಚದ್ರಾವಿಡರೆಂತಲೂ, ಪಂಚಗೌಡರೆಂತಲೂ ವರ್ಗಗಳುಂಟು. ಮಹಾ ರಾಷ್ಟ್ರದೊಳಗಿನ ಕೊಂಕಣಸ್ಥ ಮತ್ತು ದೇಶಸ್ಥ ಬಾಹ್ಮಣರು ಪಂಚದ್ರಾವಿಡರಲ್ಲಿ ಸೇರುತ್ತಾರೆ. ಇದಕ್ಕೆ ಕಾರಣವೇನಿರಬಹುದು? (೯) ಸಾವಂತವಾಡಿಯಿಂದ ಕೊಂಕಣಕ್ಕೆ ಹೋಗುವ ಮಾರ್ಗಕ್ಕೆ दोडामार्ग (ದೊಡ್ಡ ಮಾರ್ಗ) ಎಂದು ಈಗ್ಯೂ ಎನ್ನುತ್ತಾರೆ. (೧೦) ಕೊಂಕಣದಲ್ಲಿಯ ಮಹಾರಾಷ್ಟ್ರ ಭಾಷೆಯಲ್ಲಿ 'ಮಣೆ' 'ನಿಚ್ಚಣೆ' ಮುಂತಾದ ಕನ್ನಡ ಹೆಸರುಗಳಿರುತ್ತವೆ. (೧೧) ಜಕಣಾಚಾರ್ಯರು ಕಟ್ಟಿದ ಕಟ್ಟಡಗಳು ಮಹಾರಾಷ್ಟ್ರದಲ್ಲಿಯೂ ಇವೆ. ಅವುಗಳಿಗೆ ಅವರು 'ಹೇಮಾಡಪಂತೀ' ಗುಡಿಗಳೆಂದು ಹೇಳುತ್ತಾರೆ. (೧೨) ಇನ್ನೂ ಮಹತ್ವವುಳ್ಳ ಸಂಗತಿಯೇನೆಂದರೆ, ನಡು ಮಹಾರಾಷ್ಟ್ರದಲ್ಲಿ ಕನ್ನಡ ಶಿಲಾಶಾಸನಗಳೂ, ವೀರಗಲ್ಲು ಗಳೂ ದೊರೆತಿದ್ದು, ಸಾತಾರಾ ಜಿಲ್ಲೆಯ ಮಸವಡ ಎಂಬ ಗ್ರಾಮದಲ್ಲಿ ಒಂದು ಕನ್ನಡ