ನಿತ್ಯನಿರಂಜನ ನಿರವಯಖಂಡ ಪರವಸ್ತುವಿನತ್ತಣಿಂದುದಯಿಸಿ,

ವಿಕಿಸೋರ್ಸ್ದಿಂದ



Pages   (key to Page Status)   


ನಿತ್ಯನಿರಂಜನ ನಿರವಯಖಂಡ ಪರವಸ್ತುವಿನತ್ತಣಿಂದುದಯಿಸಿ
ನಿಂದ ನಿಲವನರಿದು ಭಕ್ತ
ಗುರುಪ್ರಸನ್ನವಿಡಿದು ಮಾಹೇಶ್ವರ
ಲಿಂಗಪೂಜೆಯವಿಡಿದು ಪ್ರಸಾದಿ
ಸ್ವಾನುಭಾವ ವಿವೇಕವಿಡಿದು ಪ್ರಾಣಲಿಂಗಿ
ಸ್ವಯಾನಂದವಿಡಿದು ಶರಣ
_ ಸೋಹಂ ಬ್ರಹ್ಮಾಸ್ಮಿನ್ನೆಂದು ಲಿಂಗೈಕ್ಯ. ಇಂತೀ ಷಟ್ಸ್ಥಲ ಸಂಪನ್ನನಾಗಿ
ನಿಂದ ನಿಲವ ನೀ ಬಲ್ಲೆಯಲ್ಲದೆ ಲೋಕದ ಸಂದೇಹಿಮಾನವರೆತ್ತ ಬಲ್ಲರು ಗುಹೇಶ್ವರಾ.