ನಿತ್ಯನಿರಂಜನ ಪರಂಜ್ಯೋತಿವಸ್ತು: ಉಪದೇಶವ

ವಿಕಿಸೋರ್ಸ್ದಿಂದ



Pages   (key to Page Status)   

ನಿತ್ಯನಿರಂಜನ ಪರಂಜ್ಯೋತಿವಸ್ತು: ಉಪದೇಶವ ಕೊಟ್ಟು ಗುರುವಾದ
ಕರಸ್ಥಲಕ್ಕೆ ಬಂದು ಲಿಂಗವಾದ
ಹಸರವಾದ ಪ್ರಪಂಚನಳಿದು ದಾಸೋಹವ ಮಾಡಿಸಿಕೊಂಡು ಜಂಗಮವಾದ
ಇಂತೀ ಗುರುಲಿಂಗಜಂಗಮ ಒಂದೆಯಲ್ಲದೆ ಭಿನ್ನವಿಲ್ಲ. ಈ ಮೂರಕ್ಕೆ ಮೂರನಿತ್ತು ಮೂರನೊಂದ ಮಾಡಬಲ್ಲಡೆ
ಆತ ಪ್ರಸಾದಕಾಯನಯ್ಯಾ
ಕೂಡಲಸಂಗಮದೇವಾ.