ಪಂಚವಿಂಶತಿತತ್ವಾಶ್ರಯವೆಂಬ ಪಟ್ಟಣದೊಳಗೆ ಆರುಬಣ್ಣದ

ವಿಕಿಸೋರ್ಸ್ದಿಂದ



Pages   (key to Page Status)   


ಪಂಚವಿಂಶತಿತತ್ವಾಶ್ರಯವೆಂಬ ಪಟ್ಟಣದೊಳಗೆ ಆರುಬಣ್ಣದ ಪಕ್ಷಿ ಮೂರು ಗೂಡ ಮಾಡಿಕೊಂಡು ನಾಲ್ಕರಾಹಾರವ ಕೊಂಬುವುದ ಕಂಡೆನಯ್ಯ. ಐದರ ನೀರ ಕುಡಿದು ಪರಿಣಾಮಿಸುತ್ತಿದೆ ನೋಡ. ಏಳರ ಮೊಲೆಯನುಂಡು ಎಂಟರಾಭರಣವ ತೊಟ್ಟಿದೆ ನೋಡಾ. ಹತ್ತರ ಬೆಂಬಳಿವಿಡಿದು ಒಂಬತ್ತು ಬಾಗಿಲೊಳಗೆ ನಡೆದಾಡುವದ ಕಂಡೆನಯ್ಯ. ಕೊಂಬುಕೊಂಬಿನಯಿಂಬಿನಲ್ಲಿ ಸುಳಿದಾಡುತ್ತಿದೆ ನೋಡಯ್ಯ. ಆ ಸುಳುಹಿನ ಸೂಕ್ಷ ್ಮವ ತಿಳಿದು ತನ್ನ ಸುಳುಹನರಿವ ಹಿರಿಯರಾರನು ಕಾಣೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.