ಪಂಡಿತನಾಗಲಿ, ಮೂರ್ಖನಾಗಲಿ ಸಂಚಿತಕರ್ಮ

ವಿಕಿಸೋರ್ಸ್ದಿಂದ



Pages   (key to Page Status)   

ಪಂಡಿತನಾಗಲಿ
ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಮಾಣದು
ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದೆಂದು ಶ್ರುತಿ ಸಾರುತ್ತೈದಾವೆ ನೋಡಾ. ತಾನಾವಾವ ಲೋಕದೊಳಗಿದ್ದಡೆಯೂ ಬಿಡದು
ಕರ್ಮಫಲಗೂಡಿ ಕೂಡಲಸಂಗಮದೇವಂಗೆ ಆತ್ಮನೈವೇದ್ಯವ ಮಾಡಿದವನೆ ಧನ್ಯ.