ಪರುಷ ಸೋಂಕಲು ಅವಲೋಕದ

ವಿಕಿಸೋರ್ಸ್ದಿಂದ



Pages   (key to Page Status)   


ಪರುಷ ಸೋಂಕಲು ಅವಲೋಕದ ಗುಣ ಕೆಟ್ಟು ಚಿನ್ನವಾಗದಿಹುದೆ? ಹಲವು ತೃಣಂಗಳೆಲ್ಲವು ಅಗ್ನಿಯ ಮುಟ್ಟಲು ಭಸ್ಮವಾಗದಿಹವೆ? ಹಳ್ಳಕೊಳ್ಳದ ನೀರೆಲ್ಲಾ ಬಂದು ಅಂಬುಧಿಯನೆಯ್ದಿ ಅಂಬುಧಿಯಪ್ಪುದು ತಪ್ಪದು ನೋಡಾ. ಹಲವು ವರ್ಣದ ಪದಾರ್ಥವನೆಲ್ಲವ ತಂದು ಶಿವಲಿಂಗಾರ್ಪಣವ ಮಾಡಲು ಆ ಪದಾರ್ಥದ ಪೂರ್ವಾಶ್ರಯವಳಿದು ಪ್ರಸಾದವಪ್ಪುದು ತಪ್ಪದು ನೋಡಾ. ಆ ಪ್ರಸಾದವ ಕೊಂಬ ಪ್ರಸಾದಿ ಪವಿತ್ರಕಾಯನು ನೋಡಾ. ಆತನು ಶುದ್ಧ ನಿರ್ಮಲನು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.