ಭಕ್ತನಾದಡೆ ಸಕಲಕರ್ಮವು ಚಿತ್ತ

ವಿಕಿಸೋರ್ಸ್ದಿಂದ



Pages   (key to Page Status)   


ಭಕ್ತನಾದಡೆ ಚಿತ್ತ ನಿಶ್ಚಲವಾಗಿ ಸದ್ಭಕ್ತಿ ನೆಲೆಗೊಂಡಿರಬೇಕು. ಮಹೇಶ್ವರನಾದಡೆ ಸಕಲಕರ್ಮವು ಕ್ಷಯವಾಗಿರಬೇಕು. ಪ್ರಸಾದಿಯಾದಡೆ ಶಿವಜ್ಞಾನಪರಾಯಣನಾಗಿರಬೇಕು. ಪ್ರಾಣಲಿಂಗಿಯಾದಡೆ ನಿತ್ಯಾನಿತ್ಯವಿಚಾರವನರಿದಿರಬೇಕು. ಶರಣನಾದಡೆ ಗರ್ವ ಅಹಂಕಾರದ ಮೊಳೆಯ ಮುರಿದಿರಬೇಕು. ಐಕ್ಯನಾದಡೆ ಬ್ಥಿನ್ನಭಾವವನಳಿದು ಮಹಾಜ್ಞಾನದೊಳಗೆ ಓಲಾಡಬೇಕು. ಅದೆಂತೆಂದೊಡೆ : ``ಭಕ್ತಿಃ ಕರ್ಮಕ್ಷಯೋ ಬುದ್ಧಿರ್ವಿಚಾರೋ ದರ್ಪಸಂಕ್ಷಯಃ