ಶೈವಸಿದ್ಧಾಂತಿಗಳೆಂಬ ಕಾರಣವೆಂದೊಡೆ ಅಬದ್ಧ

ವಿಕಿಸೋರ್ಸ್ದಿಂದ



Pages   (key to Page Status)   


ಶೈವಸಿದ್ಧಾಂತಿಗಳೆಂಬ ಅಬದ್ಧ ಭವಿಗಳ ಮುಖವ ನೋಡಲಾಗದು. ಅದೇನು ಕಾರಣವೆಂದೊಡೆ : ಸಾಂಗೋಪಾಂಗ ಶುದ್ಧಶರೀರಿಯಾಗಿ ಉನ್ನತಾಸನ ಗದ್ದುಗೆಯಲ್ಲಿ ಕುಳಿತು ಕಣ್ಣುಮುಚ್ಚಿ ಅಂತರಂಗದಲ್ಲಿ ಪರಮಾತ್ಮನ ಕಳೆಯ ಧ್ಯಾನಿಸಿ ಮನಸ್ಸಿನಲ್ಲಿ ಕಟ್ಟಿ ದೃಷ್ಟಿಗೆ ತಂದು
ಆ ದೃಷ್ಟಿಯಿಂದ ಪುಷ್ಪದಲ್ಲಿ ತುಂಬಿ ಮೃತ್ತಿಕೆ ಪಾಷಾಣಾದಿ ನಾನಾ ತರಹದ ಲಿಂಗಾಕಾರದ ಮೂರ್ತಿಯ ಸ್ಥಾಪಿಸಿ
ದೇವರೆಂದು ಭಾವಿಸಿ
ಜಲ ಗಂಧ ಅಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲಾದಿ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನೆ ಮಾಡಿ
ಆ ಪೂಜಾಂತ್ಯದಲ್ಲಿ ಎನ್ನ ಮಲಿನ ದೇಹದಲ್ಲಿ ನೀನು ನಿರ್ಮಲವಾದ ವಸ್ತುವು ಇರಬೇಡ ಹೋಗೆಂದು ತನ್ನ ದೇವರ ಬಾವಿ ಕೆರೆ ಹಳ್ಳ ಕೊಳ್ಳಾದಿ ಸ್ಥಾನಂಗಳಲ್ಲಿ ಹಾಕಿ ಬಿಡುವ ಶಿವದ್ರೋಹಿಗಳಿಗೆ ಕುಂಭೀಪಾತಕ ನಾಯಕ ನರಕ ತಪ್ಪದಯ್ಯ ಅಖಂಡೇಶ್ವರಾ.