ಶ್ರೀಗುರು ಶಿಷ್ಯನ ಭವಿಪೂರ್ವಾಶ್ರಯವ

ವಿಕಿಸೋರ್ಸ್ದಿಂದ



Pages   (key to Page Status)   


ಶ್ರೀಗುರು ಶಿಷ್ಯನ ಭವಿಪೂರ್ವಾಶ್ರಯವ ಕಳೆದು ಭಕ್ತನ ಮಾಡಿದ ಬಳಿಕ ಆ ಭಕ್ತ ಹೋಗಿ ಜಂಗಮವಾಗಿ
ಗುರುವಿನ ಮಠಕ್ಕೆ ಬಂದಡೆ ಆ ಜಂಗಮವೆನ್ನ ಶಿಷ್ಯನೆಂದು ಗುರುವಿನ ಮನದಲ್ಲಿ ಹೊಳೆದಡೆ ಪಂಚಮಹಾಪಾತಕ. ಆ ಜಂಗಮಕ್ಕೆ ಎನ್ನ ಗುರುವೆಂದು ಮನದಲ್ಲಿ ಭಯಭೀತಿ ಹೊಳೆದಡೆ ರೌರವನರಕ. ಇಂತೀ ಭೇದವ ಕೂಡಲಚೆನ್ನಸಂಗಯ್ಯನಲ್ಲಿ ಶರಣರೆ ಬಲ್ಲರು