ಸರ್ವಸಂಗಪರಿತ್ಯಾಗ ಮಾಡಿದ ಶಿವಶರಣನ

ವಿಕಿಸೋರ್ಸ್ದಿಂದ



Pages   (key to Page Status)   


ಸರ್ವಸಂಗಪರಿತ್ಯಾಗ ಮಾಡಿದ ಶಿವಶರಣನ ಲೋಕದ ಸಂಸಾರಿಗಳೆಂತು ಮೆಚ್ಚುವರಯ್ಯಾ ? ಊರೊಳಗಿರ್ದಡೆ [ಸಂಸಾರಿ] ಎಂಬರು
ಅಡವಿಯೊಳಗಿರ್ದಡೆ ಮೃಗನೆಂಬರು ಹೊನ್ನ ಬಿಟ್ಟಡೆ ದರಿದ್ರನೆಂಬರು
ಹೆಣ್ಣ ಬಿಟ್ಟಡೆ ನಪುಂಸಕನೆಂಬರು
ಮಣ್ಣ ಬಿಟ್ಟಡೆ ಪೂರ್ವಕರ್ಮಿ ಎಂಬರು
ಮಾತನಾಡದಿರ್ದಡೆ ಮೂಗನೆಂಬರು ಮಾತನಾಡಿದಡೆ ಜ್ಞಾನಿಗೇಕಯ್ಯಾ ಮಾತೆಂಬರು ನಿಜವನಾಡಿದಡೆ ನಿಷು*ರಿಯೆಂಬರು
ಸಮತೆಯನಾಡಿದಡೆ ಅಂಜುವನೆಂಬರು. ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣ ಲೋಕದಿಚ್ಛೆಯ ನುಡಿಯ ಲೋಕದಿಚ್ಛೆಯ ನಡೆಯ !