ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ

ವಿಕಿಸೋರ್ಸ್ದಿಂದ


Pages   (key to Page Status)   

ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ ಸುಳಿದು
ಭಕ್ತರ ಭವವ ಹರಿಯಲೆಂದು ಬಂದ ಜಂಗಮದ ಪರಿಯ ನೋಡಾ. ಉಳಲುಡಲು ಬಂದವನಲ್ಲ ಪ್ರಭುದೇವರು
ತ್ರಿವಿಧದಾಸೆ ಮುನ್ನವೆಯಿಲ್ಲ
ಪ್ರಭುದೇವರಿಗೆ. ಭಕ್ತನೆಂಬ ತನ್ನಂಗವ ತನ್ನೊಳೈಕ್ಯವ ಮಾಡಿಕೊಂಡು
ನಿರವಯವಾಗ ಬಂದ ನಿರವಯನಯ್ಯಾ
ಕೂಡಲಸಂಗಮದೇವರಲ್ಲಿ ಪ್ರಭುದೇವರು.