ಹೇಳಿಗೆಯೊಳಗಣ ಸರ್ಪ, ಈರೇಳುಲೋಕಂಗಳ

ವಿಕಿಸೋರ್ಸ್ದಿಂದ



Pages   (key to Page Status)   


ಹೇಳಿಗೆಯೊಳಗಣ ಸರ್ಪ
ಈರೇಳುಲೋಕಂಗಳ ನುಂಗಿತ್ತು; ಈರೇಳು ಲೋಕ ನುಂಗಿ ಕಾಳಕೂಟವಿಷವನೆ ಉಗುಳುತ್ತಿದೆ ನೋಡ. ಆ ವಿಷದ ಹೊಗೆ ಹತ್ತಿ ಎಲ್ಲಾ ಪ್ರಾಣಿಗಳು `ಪಶುಪತಿ ಪಶುಪತಿ' ಎನುತ್ತಿರಲು ವಿಷದ ಹೊಗೆ ಕೆಟ್ಟಿತ್ತು
ಹೇಳಿಗೆ ಮುರಿಯಿತ್ತು; ಈರೇಳುಲೋಕದ ನುಂಗಿದ ಸರ್ಪ ತಾನು ಸತ್ತಿತ್ತು. ಇದು ಮಾನವರು ಅರಿವುದಕ್ಕೆ ಉಪಮಾನವಿಲ್ಲ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.