ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ

ವಿಕಿಸೋರ್ಸ್ದಿಂದ


Pages   (key to Page Status)   

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ

ಅರಿವು ನೆರೆ ಕೂಡಿ 
ಆ[ಚಾ]ರವೆ ಪ್ರಾಣವಾಗಿ ವಿಶ್ರಮಿಸಿದ ಬಳಿಕ
ಶ್ರೀಗುರು ಕೃಪೆಯ ಮಾಡಿದ ಪ್ರಾಣಲಿಂಗದ ಘನವೆಂತೆಂದಡೆ: ಮತ್ಸ್ಯನುಂಗಿದ ಮಾಣಿಕ್ಯದಂತೆ
ಮುತ್ತುನುಂಗಿದ ನೀರಿನಂತೆ
ಕಣ್ಣಾಲಿ ನುಂಗಿದ ನೋಟದಂತೆ
ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ ಸ್ವಯಾನುಭಾವಿಗಳ ಅನುಭಾವವ ತೋರಿ ಬದುಕಿಸಾ
ಕೂಡಲಸಂಗಮದೇವಾ.